ಇದೇ ವೇಳೆ ಉಗ್ರ ಸಂಘಟನೆಗಳ ವಿರುದ್ಧ ಪಾಕಿಸ್ತಾನ ಸರ್ಕಾರ ಕೈಗೊಂಡಿರುವ ಕ್ರಮಗಳು ಕೇವಲ ಕಣ್ಣೊರೆಸುವ ತಂತ್ರ ಎಂದು ಟೀಕಿಸಿರುವ ಭಾರತ, ಪಾಕಿಸ್ತಾನ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಅಂತೆಯೇ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ತನ್ನ ಪ್ರಯತ್ನ ಮುಂದುವರೆಯಲಿದ್ದು, ಈ ಸಂಬಂಧ ಅಗತ್ಯ ರಾಜತಾಂತ್ರಿಕ ಯೋಜನೆ ರೂಪಿಸುವುದಾಗಿ ಹೇಳಿದೆ. ಅಂತೆಯೇ ಈ ಸಂಬಂಧ ಯಾವುದೇ ಆತುರದ ನಿರ್ಧಾರ ಕೈಗೊಳ್ಳದೇ ಸಂಯಮದಿಂದ ಕಾಯುತ್ತೇವೆ ಎಂದೂ ಭಾರತ ಹೇಳಿದೆ.