ಇಸ್ಲಾಮಾಬಾದ್ ರಣತಂತ್ರ ಅಧ್ಯಯನ ಸಂಸ್ಥೆ(ಐಎಸ್ಎಸ್ಐ) ಏರ್ಪಡಿಸಿದ ಪಾಕಿಸ್ತಾನ-ಚೀನಾ ಸಂಸ್ಥೆ ಹಾಗೂ ವಿದೇಶಾಂಗ ವ್ಯವಹಾರಗಳ ಸಮಿತಿ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷದ ಸದಸ್ಯರಾದ ಹುಸೇನ್ ಅವರು, ‘ಪುಲ್ವಾಮಾ ದಾಳಿ ಬಳಿಕ ವಾಯುದಾಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ಕಚ್ಚಾಟದ ಸಂದರ್ಭದಲ್ಲಿ ಇಡೀ ದೇಶವೇ ಒಂದಾಗಿತ್ತು. ಇದರಿಂದಾಗಿಯೇ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿತು,’ ಎಂದು ಪ್ರತಿಪಾದಿಸಿದರು.