ಈಗಿನ ಅನಾಹುತದಿಂದ 1000 ಕ್ಕಿಂತಲೂ ಹೆಚ್ಚು ಸಾವು ಸಂಭವಿಸಿವೆ ಎಂಬುದಕ್ಕೆ ಘಟನೆಯ ಭೀಕರತೆಯೇ ಸಾಕ್ಷಿಯಾಗಿದೆ ಎಂದರು. ಚಂಡಮಾರುತದಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಳಾಗಿದೆ. ಅನೇಕ ಕಡೆ ಸಂಪರ್ಕ ಕಡಿದು ಹೋಗಿದೆ ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಇತರ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳ ಸಾಮಾನ್ಯ ಕಾರ್ಯಗಳ ಮೇಲೂ ಬಹಳ ಕೆಟ್ಟ ಪರಿಣಾಮ ಬೀರಿದೆ ಎಂದು ಅವರು ಹೇಳಿದರು. ಇನ್ನು ಪಂಗ್ಯು ಮತ್ತು ಬುಜಿ ನದಿಗಳ ಪ್ರವಾಹದಿಂದ ಅನೇಕ ಗ್ರಾಮಗಳು ಕಣ್ಮರೆಯಾಗಿವೆ. ನದಿಗಳ ನೀರಿನಲ್ಲಿ ದೇಹಗಳು ತೇಲುತ್ತಿರುವುದು ಸಾಮಾನ್ಯವಾಗಿದ್ದು, ಪ್ರವಾಹ ಮತ್ತು ಚಂಡಮಾರುತದಂತಹ ವಿಕೋಪಗಳಿಂದ ಜನರ ಜೀವ ಕಾಪಾಡುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂದು ಅವರು ಹೇಳಿದರು.