ಅಪಹೃತ ಬಾಲಕಿಯ ತಂದೆಯು ಬದಿನ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸರ್ದಾರ್ ಹಸನ್ ನಿಯಾಜಿ ಅವರ ಬಳಿ ಹೋಗಿ ದೂರು ದಾಖಲಿಸಿದ್ದಾರೆ. ಸಿಂಧ್ ಪ್ರಾಂತ್ಯದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಹರಿರಾಮ್ ಕಿಶೋರಿ ಲಾಲ್ ಅವರು ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಎಫ್ಐಆರ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಸಿಂಧ್ನಲ್ಲಿ ಅಪ್ರಾಪ್ತ ಮಹಿಳೆಯರ ಮದುವೆ ನಿಷಿದ್ಧವಾಗಿದ್ದು, ಅದನ್ನು ಮೀರಿ ವಿವಾಹವಾದರೆ ಅಪರಾಧವಾಗುತ್ತದೆ ಎಂದು ಲಾಲ್ ಎಚ್ಚರಿಕೆ ನೀಡಿದ್ದಾರೆ. ಸದ್ಯಕ್ಕೆ ಆ ಬಾಲಕಿಯ ಕುಟುಂಬಕ್ಕೆ ರಕ್ಷಣೆ ಕೊಡುವಂತೆ ಪೊಲೀಸರಿಗೆ ಅವರು ಸೂಚಿಸಿದ್ದು, ಇದೇ ವೇಳೆ, ಬಾಲಕಿಯನ್ನು ಹುಡುಕಿ ರಕ್ಷಿಸುವ ಪ್ರಯತ್ನ ನಡೆಯುತ್ತಿದೆ.