ನೀರವ್ ಮೋದಿಯಿಂದ ಮೋಸ ಹೋಗಿರುವ ಬ್ಯಾಂಕುಗಳ ಪರವಾಗಿ ಕ್ರೌನ್ ಪ್ರಾಸಿಕ್ಯೂಷನ್ ಸರ್ವೀಸ್ ನ ವಕೀಲರು ವಾದ ಮಂಡಿಸಿದರು. ಈ ವೇಳೆ ಪ್ರಕರಣ ಸಂಬಂಧ ಸಾಕ್ಷಿಗಳಿಗೆ ನೀರವ್ ಮೋದಿ ಕೊಲೆ ಬೆದರಿಕೆ ಮತ್ತು ಲಂಚದ ಆಮಿಷ ಒಡ್ಡಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನಿರಾಕರಿಸಬೇಕು ಎಂದು ಮನವಿ ಮಾಡಿದರು. ಹೀಗಾಗಿ ಎರಡನೇ ಬಾರಿಗೂ ನೀರವ್ ಗೆ ಜಾಮೀನು ನಿರಾಕರಣೆಯಾಗಿದೆ.