ಬಿಬಿಸಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಉಗ್ರ ದಾಳಿಯ ಕುರಿತು ತನಿಖೆ ನಡೆಸಿರುವ ಅಧಿಕಾರಿಗಳು ಸಾಕಷ್ಟು ಮಾಹಿತಿ ನೀಡಿದ್ದಾರೆ. ಈ ಪೈಕಿ ಉಗ್ರರು ದಾಳಿಗೂ ಮುನ್ನ ಭಾರತದ ಕೆಲ ನಗರಗಳಿಗೆ ಭೇಟಿ ನೀಡಿದ್ದ ವಿಚಾರ ತಿಳಿದುಬಂದಿದೆ. ಈ ಪೈಕಿ ಉಗ್ರರು ತರಬೇತಿಗಾಗಿ ಬೆಂಗಳೂರು, ಕೇರಳ ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ವಿಚಾರ ಕೂಡ ಬಯಲಾಗಿದೆ ಎಂದು ಹೇಳಿದ್ದಾರೆ.