ಹೌದು.. 253 ಮಂದಿಯ ಸಾವಿಗೆ ಕಾರಣವಾಗಿದ್ದ ಈಸ್ಟರ್ ಸಂಡೇ ದಾಳಿ ಬಳಿಕ ಶ್ರೀಲಂಕಾ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬುರ್ಖಾ ನಿಷೇಧ ನಿರ್ಣಯ ಕೈಗೊಂಡ ಬೆನ್ನಲ್ಲೇ ಇದೀಗ ಶಿಕ್ಷಣ ಇಲಾಖೆಯಡಿಯಲ್ಲಿದ್ದ ಮದರಸಾಗಳನ್ನು ಧಾರ್ಮಿಕ ಮತ್ತು ಸಂಸ್ಕೃತಿ ಇಲಾಖೆಯಡಿಗೆ ತಂದಿದೆ. ಈ ಬಗ್ಗೆ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಮಾಹಿತಿ ನೀಡಿದ್ದು, ಉಗ್ರ ದಾಳಿಯಲ್ಲಿ ಕೆಲ ಮದರಸಾಗಳ ಕೈವಾಡದ ಕುರಿತು ತನಿಖಾ ಸಂಸ್ಥೆಗಳು ಶಂಕಿಸಿವೆ. ಅಲ್ಲದೆ ಕೆಲ ಮದರಸಾಗಳ ಕಾರ್ಯ ನಿರ್ವಹಣೆ ಮೇಲೂ ತನಿಖಾ ಸಂಸ್ಥೆ ಶಂಕೆ ವ್ಯಕ್ತಪಡಿಸಿದ್ದು, ಈ ಕಾರಣಕ್ಕೆ ಶ್ರೀಲಂಕಾ ಸರ್ಕಾರ ಮದರಸಾಗಳನ್ನು ಶಿಕ್ಷಣ ಇಲಾಖೆಯಿಂದ ಧಾರ್ಮಿಕ ಮತ್ತು ಸಂಸ್ಕೃತಿ ಇಲಾಖೆಯಡಿಗೆ ತಂದಿದೆ ಎನ್ನಲಾಗಿದೆ.