ನವದೆಹಲಿ: ಶ್ರೀಲಂಕಾದ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಈ ತಿಂಗಳ 29 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಪ್ರಕಟಿಸಿದ್ದಾರೆ.
ಸದ್ಯ ಶ್ರೀಲಂಕಾ ಪ್ರವಾಸದಲ್ಲಿರುವ ಸಚಿವ ಜೈಶಂಕರ್ ಶ್ರೀ ಲಂಕಾದ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿ ಶುಭಕೋರಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ಭಾರತಕ್ಕೆ ಭೇಟಿ ನೀಡುವಂತೆ ಕೋರಿರುವ ಆಹ್ವಾನವನ್ನು ರಾಜಪಕ್ಸೆ ಅವರಿಗೆ ಹಸ್ತಾಂತರಿಸಿದರು.
ಪ್ರಧಾನಿ ಮೋದಿ ಆಹ್ವಾನವನ್ನು ಸ್ವೀಕರಿಸಿದ ರಾಜಪಕ್ಸೆ, ಈ ತಿಂಗಳ 29 ರಂದು ಭಾರತ ಪ್ರವಾಸ ಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.
Advertisement