ಶ್ರೀಲಂಕಾ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ನವೆಂಬರ್ 29ರಂದು ಭಾರತ ಭೇಟಿ

ಶ್ರೀಲಂಕಾದ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಈ ತಿಂಗಳ 29 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಪ್ರಕಟಿಸಿದ್ದಾರೆ.
ಗೋಟಬಯ ರಾಜಪಕ್ಸೆ - ಜೈಶಂಕರ್
ಗೋಟಬಯ ರಾಜಪಕ್ಸೆ - ಜೈಶಂಕರ್

ನವದೆಹಲಿ: ಶ್ರೀಲಂಕಾದ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಈ ತಿಂಗಳ 29 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಪ್ರಕಟಿಸಿದ್ದಾರೆ.

ಸದ್ಯ ಶ್ರೀಲಂಕಾ ಪ್ರವಾಸದಲ್ಲಿರುವ ಸಚಿವ ಜೈಶಂಕರ್ ಶ್ರೀ ಲಂಕಾದ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿ ಶುಭಕೋರಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, ಭಾರತಕ್ಕೆ ಭೇಟಿ ನೀಡುವಂತೆ ಕೋರಿರುವ ಆಹ್ವಾನವನ್ನು ರಾಜಪಕ್ಸೆ ಅವರಿಗೆ ಹಸ್ತಾಂತರಿಸಿದರು.

ಪ್ರಧಾನಿ ಮೋದಿ ಆಹ್ವಾನವನ್ನು ಸ್ವೀಕರಿಸಿದ ರಾಜಪಕ್ಸೆ, ಈ ತಿಂಗಳ 29 ರಂದು ಭಾರತ ಪ್ರವಾಸ ಕೈಗೊಳ್ಳುವುದಾಗಿ ಪ್ರಕಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com