ಭಾರತದ ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿಯಿಂದಲೂ ಬೆಂಬಲ!

ಶಾಂತಿಯುತ ಪ್ರತಿಭಟನೆಗೆ ಕೆನಡಾ ಎಂದಿಗೂ ಬೆಂಬಲಿಸಲಿದೆ ಎಂದು ಹೇಳುವ ಮೂಲಕ ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
ಭಾರತದ ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿಯಿಂದಲೂ ಬೆಂಬಲ!
ಭಾರತದ ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿಯಿಂದಲೂ ಬೆಂಬಲ!
Updated on

ಶಾಂತಿಯುತ ಪ್ರತಿಭಟನೆಗೆ ಕೆನಡಾ ಎಂದಿಗೂ ಬೆಂಬಲಿಸಲಿದೆ ಎಂದು ಹೇಳುವ ಮೂಲಕ ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. 

ರೈತರ ಪ್ರತಿಭಟನೆಯನ್ನು ಆತಂಕಕಾರಿ ಪರಿಸ್ಥಿತಿ ಎಂದು ಹೇಳಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ, ಗುರು ನಾನಕ್ ಜಯಂತಿಯ ಆಚರಣೆಯ ಭಾಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಫೇಸ್ ಬುಕ್ ವಿಡಿಯೋ ಮೂಲಕ ಮಾತನಾಡುತ್ತಿದ್ದರು.

ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಗುರುತಿಸದೇ ಮಾತನಾಡಿದಲ್ಲಿ ನಾನು ಅಜಾಗರೂಕನಾಗುತ್ತೇನೆ, ಪರಿಸ್ಥಿತಿ ಆತಂಕಕಾರಿಯಾಗಿದ್ದು, ನಾವು ಸ್ನೇಹಿತರು ಹಾಗೂ ಸಂಬಧಿಕರ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಹೇಳಿದ್ದಾರೆ.

ಕೆನಡಾ ಶಾಂತಿಯುತ ಪ್ರತಿಭಟನೆಗಳನ್ನು ಎಂದಿಗೂ ಬೆಂಬಲಿಸಲಿದೆ. ಮಾತುಕತೆಯಲ್ಲಿನ ಮಹತ್ವವನ್ನು ನಾವೂ ನಂಬುತ್ತೇವೆ. ನಾವು ನಮ್ಮ ಆತಂಕಗಳನ್ನು ನೇರವಾಗಿ ಹಲವು ವಿಧಾನಗಳ ಮೂಲಕ ಭಾರತೀಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ ಎಂದೂ ಕೆನಡಾ ಪ್ರಧಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com