ಇಂಧೋರ್: ಕೋವಿಡ್ ರೋಗಿಗೆ ಕಿರುಕುಳ ಇಬ್ಬರು ವಾರ್ಡ್ ಬಾಯ್ ಗಳ ಬಂಧನ

ಕೋವಿಡ್ ಸೋಂಕಿತ ರೋಗಿಯ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಇಂಧೋರ್ ನ ಮಹಾರಾಜ್ ಯಶವಂತರಾವ್ ಆಸ್ಪತ್ರೆಯ ಇಬ್ಬರು ವಾರ್ಡ್ ಬಾಯ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಇಂಧೋರ್: ಕೋವಿಡ್ ಸೋಂಕಿತ ರೋಗಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಇಂಧೋರ್ ನ ಮಹಾರಾಜ್ ಯಶವಂತರಾವ್ ಆಸ್ಪತ್ರೆಯ ಇಬ್ಬರು ವಾರ್ಡ್ ಬಾಯ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಶುಭಂ ಮತ್ತು ಹೃದಯೇಶ್ ಬಂಧಿತ ಆರೋಪಿಗಳು, ಆಸ್ಪತ್ರೆಯ ಕೋವಿಡ್ ವಾರ್ಡ್ ವಿಭಾಗದಲ್ಲಿ  ಕೊರೋನಾ ರೋಗಿಗೆ ಕಿರುಕುಳ  ನೀಡಿದ್ದಾರೆ. ಮೇ 5 ಮತ್ತು ಮೇ 6 ರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಇಂದೋರ್‌ನ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಬಾಗ್ರಿ ತಿಳಿಸಿದ್ದಾರೆ.

"ಈ ಘಟನೆಯ ಬಗ್ಗೆ ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದಳು, ಆ ವೇಳೆ ಇಬ್ಬರೂ ಆರೋಪಿಗಳು ಆಸ್ಪತ್ರೆಯಿಂದ ಪರಾರಿಯಾಗಿದ್ದರು. ಸನ್ಯೋಗಿತಗಂಜ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ವಾರ್ಡ್ ಹುಡುಗರು ಕ್ರಿಮಿನಲ್ ದಾಖಲೆ ಹೊಂದಿದ್ದಾರೋ ಇಲ್ಲವೋ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com