Source : The New Indian Express
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾಮಂಡಳಿ ಸಭೆಯಲ್ಲಿ 'ಒಂದೆಡೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಸಾಮಾ ಬಿನ್ ಲ್ಯಾಡೆ ನಂಥವರನ್ನು ಹುತಾತ್ಮ ಎಂದು ವೈಭವೀಕರಿಸುತ್ತಾರೆ. ಆದರೆ ಇಲ್ಲಿ ಬಂದು ಶಾಂತಿ ಮಂತ್ರ ಜಪಿಸುತ್ತಾರೆ.' ಎಂದು ಭಾರತದ ಪ್ರತಿನಿಧಿ ಎ ಅಮರ್ ನಾಥ್ ಕಿಡಿ ಕಾರಿದ್ದಾರೆ. 76ನೇ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಇದನ್ನೂ ಓದಿ: ನಿಷೇಧಿತ ಉಗ್ರ ಸಂಘಟನೆ ಜೊತೆ ಸರ್ಕಾರ ಮಾತುಕತೆ: ಪಾಕ್ ಗೃಹಸಚಿವ ಸಮರ್ಥನೆ
ಪಾಕಿಸ್ತಾನ ಜಾಗತಿಕ ಮಟ್ಟದ ಭಯೋತ್ಪಾದನೆಯ ಕೇಂದ್ರ. ಗಡಿಯಾಚೆಗೆ ಭಯೋತ್ಪದನಾ ಚಟುವಟಿಕೆಗಳನ್ನು ಎಂದಿನಿಂದಲೂ ನಡೆಸಿಕೊಂಡು ಬಂದಿದೆ ಎಂದು ಅಮರ್ ನಾಥ್ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕ್ ಪ್ರಜೆ ಬಂಧನ: 6 ಕೆಜಿ ಹೆರಾಯಿನ್ ವಶ
ಪಾಕಿಸ್ತಾನ ಈ ಹಿಂದೆ ಜಮ್ಮು ಕಾಶ್ಮೀರ ಮತ್ತು ಲಡಾಖ್ ವಿಚಾರಗಳಲ್ಲಿ ಮೂಗು ತೂರಿಸಿತ್ತು. ಇವೆಲ್ಲಾ ಭಾರತ ಆಂತರಿಕ ವಿಚಾರಗಳಾಗಿವೆ ಎಂದು ಅವರು ಇದೇ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಟಾಂಗ್ ನೀಡಿದ್ದಾರೆ.