ಗಡಿಯಲ್ಲಿ ನಡೆದ ಘಟನೆಗಳಿಂದ ಚೀನಾ-ಭಾರತದ ಸಂಬಂಧ ಅತ್ಯಂತ ಕಠಿಣ ಹಂತದಲ್ಲಿದೆ: ವಿದೇಶಾಂಗ ಸಚಿವ ಜೈಶಂಕರ್ 

ಗಡಿಯಲ್ಲಿ ನಡೆದ ಘಟನೆಗಳಿಂದಾಗಿ ಭಾರತ ಮತ್ತು ಚೀನಾದ ಸಂಬಂಧ ಅತ್ಯಂತ ಕಠಿಣ ಹಂತದಲ್ಲಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. 
ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್
ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್
Updated on

ಬ್ಯಾಂಕಾಕ್: ಗಡಿಯಲ್ಲಿ ನಡೆದ ಘಟನೆಗಳಿಂದಾಗಿ ಭಾರತ ಮತ್ತು ಚೀನಾದ ಸಂಬಂಧ ಅತ್ಯಂತ ಕಠಿಣ ಹಂತದಲ್ಲಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. 

ಚೀನಾ- ಭಾರತದ ಗಡಿ ಭಾಗದಲ್ಲಿ ಚೀನಾ ಮಾಡಿದ ಕೆಲಸಗಳಿಂದಾಗಿ ಈ ಪರಿಸ್ಥಿತಿ ಉಂಟಾಗಿದ್ದು, ಉಭಯ ದೇಶಗಳೂ ಕೈಜೋಡಿಸದೇ ಇದ್ದಲ್ಲಿ ಏಷ್ಯಾದ ಶತಮಾನವಾಗುವುದಿಲ್ಲ ಎಂದು ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ಬ್ಯಾಂಕಾಕ್ ನ ಪ್ರತಿಷ್ಠಿತ ಚುಲಾಂಗ್‌ಕಾರ್ನ್ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ವೇಳೆ ಹಲವು ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದಾಗ ಈ ಅಭಿಪ್ರಾಯವನ್ನು ಜೈಶಂಕರ್ ಹಂಚಿಕೊಂಡಿದ್ದಾರೆ.

"ಭಾರತ ಹಾಗೂ ಚೀನಾ ಒಟ್ಟಿಗೆ ಬಂದಾಗ ಏಷ್ಯಾದ ಶತಮಾನ ಘಟಿಸುತ್ತದೆ. ಇಲ್ಲದೇ ಇದ್ದಲ್ಲಿ ಆ ಕನಸು ನನಸಾಗುವುದು ಕಷ್ಟ" ಎಂದು ಜೈ ಶಂಕರ್ ಹೇಳಿದ್ದಾರೆ.

"ಚೀನಾ ಗಡೊಯಲ್ಲಿ ಮಾಡಿದ ಕೆಲಸಗಳಿಂದ ಈಗ ಭಾರತ-ಚೀನಾ ಸಂಬಂಧ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿದೆ, ಒಂದು ವೇಳೆ ಚೀನಾ-ಭಾರತ ಒಟ್ಟಿಗೆ ಬರುವುದಕ್ಕೆ ಕೇವಲ ಶ್ರೀಲಂಕಾ ಮಾತ್ರ ಅಲ್ಲ ಬಹಳಷ್ಟು ಕಾರಣಗಳಿವೆ" ಎಂದು ಜೈಶಂಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com