ಇಂಡೋನೇಷ್ಯಾದಲ್ಲಿ 5.4 ತೀವ್ರತೆಯ ಭೂಕಂಪ: ಸುಮಾರು 162 ಮಂದಿ ಸಾವು, ಕನಿಷ್ಠ 700 ಮಂದಿಗೆ ಗಾಯ

ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸೋಮವಾರ ಸಂಭವಿಸಿದ ಭೂಕಂಪನದಿಂದ ಸುಮಾರು 162 ಜನರು ಸಾವಿಗೀಡಾಗಿದ್ದು, 700 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಆಡಳಿತದ ವಕ್ತಾರರು ಸೋಮವಾರ ತಿಳಿಸಿದ್ದಾರೆ.
ಇಂಡೋನೇಷ್ಯಾದ ಪಶ್ಚಿಮ ಜಾವಾದ ಸಿಯಾಂಜೂರ್‌ನಲ್ಲಿ ಭೂಕಂಪದಿಂದ ಹಾನಿಗೊಳಗಾದ ಕಟ್ಟಡದ ಅವಶೇಷಗಳಡಿ ರಕ್ಷಣಾ ಕಾರ್ಯಾಚರಣೆ. (ಚಿತ್ರ- ಎಪಿ)
ಇಂಡೋನೇಷ್ಯಾದ ಪಶ್ಚಿಮ ಜಾವಾದ ಸಿಯಾಂಜೂರ್‌ನಲ್ಲಿ ಭೂಕಂಪದಿಂದ ಹಾನಿಗೊಳಗಾದ ಕಟ್ಟಡದ ಅವಶೇಷಗಳಡಿ ರಕ್ಷಣಾ ಕಾರ್ಯಾಚರಣೆ. (ಚಿತ್ರ- ಎಪಿ)
Updated on

ಜಕಾರ್ತ: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸೋಮವಾರ ಸಂಭವಿಸಿದ ಭೂಕಂಪನದಿಂದ ಸುಮಾರು 162 ಜನರು ಸಾವಿಗೀಡಾಗಿದ್ದು, 700 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಭೂಕಂಪನದ ತೀವ್ರತೆಯಿಂದಾಗಿ ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಆಡಳಿತದ ವಕ್ತಾರರು ಸೋಮವಾರ ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪನವು 5.4 ರ ತೀವ್ರತೆಯನ್ನು ಹೊಂದಿತ್ತು ಮತ್ತು ಜಕಾರ್ತಾದ ದಕ್ಷಿಣದ ಪಟ್ಟಣಗಳ ಬಳಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.

ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಸುಮಾರು ಕನಿಷ್ಠ 700 ಜನರು ಗಾಯಗೊಂಡಿದ್ದಾರೆ ಎಂದು ಭೂಮಿ ಕಂಪನದಿಂದ ಹೆಚ್ಚಿನ ಹಾನಿಗೊಳಗಾದ ಪಟ್ಟಣದ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ನನಗೆ ದೊರೆತ ಮಾಹಿತಿ ಪ್ರಕಾರ, ಸುಮಾರು 162 ಮಂದಿ ಮೃತಪಟ್ಟಿದ್ದು, ಕನಿಷ್ಠ 700 ಮಂದಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕಟ್ಟಡಗಳ ಅವಶೇಷಗಳ ಅಡಿ ಸಿಲುಕಿದ್ದವರು' ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ಬ್ರಾಡ್‌ಕಾಸ್ಟರ್ ಮೆಟ್ರೋ ಟಿವಿಗೆ ತಿಳಿಸಿದ್ದಾರೆ.

ಇಂಡೋನೇಷ್ಯಾದ ಹವಾಮಾನ ಮತ್ತು ಭೂಗೋಳಶಾಸ್ತ್ರ ಏಜೆನ್ಸಿ, ಭೂಕಂಪವು 5.6 ರ ತೀವ್ರತೆಯನ್ನು ಹೊಂದಿತ್ತು ಮತ್ತು ಜಕಾರ್ತಾದಿಂದ ಸುಮಾರು 100 ಕಿಲೋಮೀಟರ್ (60 ಮೈಲುಗಳು) ಸಿಯಾಂಜೂರ್ ಬಳಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿ ಕಂಪಿಸಿದ ಬಳಿಕ ಜನರು ಕಟ್ಟಡಗಳಿಂದ ಹೊರಬಂದಿದ್ದಾರೆ.

ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಗಾಬರಿಗೊಂಡ ಕಾರ್ಮಿಕರು ತಮ್ಮ ಕಟ್ಟಡಗಳಿಂದ ಹೊರಗೆ ಹೋಡಿಹೋದರು ಎನ್ನುತ್ತಾರೆ 22 ವರ್ಷದ ವಕೀಲರಾದ ಮಾಯಾದಿತಾ ವಾಲುಯೊ.

ನನ್ನ ಕೆಳಗಿರುವ ನೆಲ ಅಲುಗಾಡುತ್ತಿರುವಾಗ ನಾನು ಕೆಲಸ ಮಾಡುತ್ತಿದ್ದೆ. ನನಗೆ ಕಂಪನದ ಸ್ಪಷ್ಟ ಅನುಭವ ಉಂಟಾಯಿತು. ಅದು ಏನೆಂದು ತಿಳಿಯುವ ಹೊತ್ತಿಗೆ, ಅದು ಇನ್ನಷ್ಟು ಬಲವಾಯಿತು ಮತ್ತು ಸ್ವಲ್ಪ ಸಮಯದವರೆಗೆ ಹಾಗೆಯೇ ಇತ್ತು. ಈ ವೇಳೆ ನನ್ನ ತಲೆ ತಿರುಗಿದಂತಾಯಿತು ಮತ್ತು ನಾನು 14ನೇ ಮಹಡಿಯಿಂದ ಕೆಳಗೆ ಬರಬೇಕಿತ್ತು' ಎಂದು ಅವರು ಹೇಳಿದರು.

ಜಕಾರ್ತದಲ್ಲಿರುವ ತಮ್ಮ ಕಚೇರಿಯ ಗೋಪುರದಲ್ಲಿ ಕೆಲಸ ಮಾಡುತ್ತಿರುವ ಎಎಫ್‌ಪಿ ಪತ್ರಕರ್ತರಿಗೂ ಕಟ್ಟಡವನ್ನು ಕೂಡಲೇ ತೆರವು ಮಾಡುವಂತೆ ಆದೇಶಿಸಲಾಯಿತು.

ಪೆಸಿಫಿಕ್ 'ರಿಂಗ್ ಆಫ್ ಫೈರ್'ನಲ್ಲಿನ ತನ್ನ ಸ್ಥಾನದಿಂದಾಗಿ ಇಂಡೋನೇಷ್ಯಾವು ಆಗಾಗ್ಗೆ ಭೂಕಂಪನ ಮತ್ತು ಜ್ವಾಲಾಮುಖಿಯಂತಹ ನೈಸರ್ಗಿಕ ಅನುಭವಗಳನ್ನು ಪಡೆಯುತ್ತಲೇ ಇರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com