social_icon

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ಉಲ್ಲಂಘಿಸಿದ 600ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ

ಕರ್ಫ್ಯೂ ನಿಯಮ ಉಲ್ಲಂಘಿಸಿದ 600ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಶ್ರೀಲಂಕಾದಲ್ಲಿ ಭಾನುವಾರ ಬಂಧಿಸಲಾಗಿದೆ. ನಿನ್ನೆ ಶನಿವಾರ ಸಾಯಂಕಾಲ 6 ಗಂಟೆಯಿಂದ ನಾಳೆ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಶ್ರೀಲಂಕಾದ(Sri Lanka) ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ಹೇರಲಾಗಿದೆ.

Published: 03rd April 2022 01:30 PM  |   Last Updated: 03rd April 2022 01:37 PM   |  A+A-


Sri Lankan army soldiers stand guard before curfew begins in Colombo, Sri Lanka, Saturday, April 2, 2022.

ಶ್ರೀಲಂಕಾದಲ್ಲಿ ಕರ್ಫ್ಯೂ ಅಂಗವಾಗಿ ಭದ್ರತಾ ಪಡೆ ನಿಯೋಜನೆ

Posted By : sumana
Source : ANI

ಕೊಲಂಬೊ: ಕರ್ಫ್ಯೂ ನಿಯಮ ಉಲ್ಲಂಘಿಸಿದ 600ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಶ್ರೀಲಂಕಾದಲ್ಲಿ ಭಾನುವಾರ ಬಂಧಿಸಲಾಗಿದೆ. ನಿನ್ನೆ ಶನಿವಾರ ಸಾಯಂಕಾಲ 6 ಗಂಟೆಯಿಂದ ನಾಳೆ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಶ್ರೀಲಂಕಾದ(Sri Lanka) ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ಹೇರಲಾಗಿದೆ.

ನಿನ್ನೆ ರಾತ್ರಿ 10 ಗಂಟೆಯಿಂದ ಇಂದು ಬೆಳಗ್ಗೆ 6.00 ಗಂಟೆಯವರೆಗೆ ಪಶ್ಚಿಮ ಪ್ರಾಂತ್ಯದಲ್ಲಿ 664 ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಕೊಲಂಬೊ ಗೆಜೆಟ್ ವರದಿ ಮಾಡಿದೆ. ಭಾನುವಾರದ ಯೋಜಿತ ಪ್ರತಿಭಟನೆಗೆ ಮುಂಚಿತವಾಗಿ, ದೇಶವು ತೀವ್ರ ವಿದ್ಯುತ್ ಬಿಕ್ಕಟ್ಟು ಮತ್ತು ಏರುತ್ತಿರುವ ಹಣದುಬ್ಬರವನ್ನು ಎದುರಿಸುತ್ತಿರುವ ಕಾರಣ ದ್ವೀಪ ರಾಷ್ಟ್ರವು 36 ಗಂಟೆಗಳ ಕರ್ಫ್ಯೂ ಘೋಷಿಸಿತ್ತು.

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಇಂಧನ ಆಮದುಗಳಿಗೆ ಪಾವತಿಸಲು ವಿದೇಶಿ ವಿನಿಮಯವನ್ನು ಪಡೆಯಲು ಸರ್ಕಾರವು ಹರಸಾಹಸಪಡುತ್ತಿದೆ. 'ಅರಬ್ ಸ್ಪ್ರಿಂಗ್' ಶೈಲಿಯ ಪ್ರತಿಭಟನೆಯ ಮೊದಲು ದ್ವೀಪದಾದ್ಯಂತ ಕರ್ಫ್ಯೂ ಘೋಷಿಸಲಾಗಿದೆ ಎಂದು ಕೊಲಂಬೊ ಗೆಜೆಟ್ ವರದಿ ಮಾಡಿದೆ.

ಅರಬ್ ಸ್ಪ್ರಿಂಗ್ ಸರ್ಕಾರದ ವಿರುದ್ಧ ಪ್ರತಿಭಟನೆಗಳು, ದಂಗೆಗಳು ಮತ್ತು ಸಶಸ್ತ್ರ ದಂಗೆಗಳ ಸರಣಿಯಾಗಿದ್ದು, ಇದು 2010ರ ದಶಕದ ಆರಂಭದಲ್ಲಿ ಅರಬ್ ಪ್ರಪಂಚದಾದ್ಯಂತ ಹರಡಿತು. ದ್ವೀಪ ರಾಷ್ಟ್ರವು ಅಭೂತಪೂರ್ವ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪ್ರವಾಸೋದ್ಯಮ ಕ್ಷೇತ್ರದ ಕುಸಿತದಿಂದಾಗಿ COVID-19 ಸಾಂಕ್ರಾಮಿಕ ರೋಗದಿಂದ ಶ್ರೀಲಂಕಾದ ಆರ್ಥಿಕತೆಯು ಪತನದತ್ತ ಸಾಗುತ್ತಿದೆ.

ಇಂದು ಭಾನುವಾರ ಮಧ್ಯರಾತ್ರಿಯ ನಂತರ ರಾಷ್ಟ್ರವ್ಯಾಪಿ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. Facebook, Twitter, WhatsApp, YouTube, Snapchat, TikTok ಮತ್ತು Instagram ಸೇರಿದಂತೆ ಸುಮಾರು ಎರಡು ಡಜನ್ ಸಾಮಾಜಿಕ ಮಾಧ್ಯಮ ಸಂಸ್ಥೆಗಳ ಮೇಲೆ ದೇಶದ ಆರ್ಥಿಕ ಕುಸಿತ ಪರಿಣಾಮ ಬೀರಿವೆ.

ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧದ ಕುರಿತು ಪ್ರತಿಕ್ರಿಯಿಸಿದ ಶ್ರೀಲಂಕಾ ಯುವ ಮತ್ತು ಕ್ರೀಡಾ ಸಚಿವ ನಮಲ್ ರಾಜಪಕ್ಸೆ, ವಿಪಿಎನ್‌ಗಳ (ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್) ಲಭ್ಯತೆಯಿಂದಾಗಿ ಇಂತಹ ನಿಷೇಧಗಳು ನಿಷ್ಪ್ರಯೋಜಕವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ ತಲುಪಿದ ಭಾರತದ 40,000 ಮೆಟ್ರಿಕ್ ಟನ್ ಡೀಸೆಲ್

"ಸಾಮಾಜಿಕ ಮಾಧ್ಯಮವನ್ನು ನಿರ್ಬಂಧಿಸುವುದನ್ನು ನಾನು ಎಂದಿಗೂ ಒಪ್ಪುವುದಿಲ್ಲ. ವಿಪಿಎನ್ ಲಭ್ಯತೆ, ಅಂತಹ ನಿಷೇಧಗಳನ್ನು ಸಂಪೂರ್ಣವಾಗಿ ನಿಷ್ಪ್ರಯೋಜಕಗೊಳಿಸುತ್ತದೆ. ಅಧಿಕಾರಿಗಳು ಹೆಚ್ಚು ಪ್ರಗತಿಪರವಾಗಿ ಯೋಚಿಸಲು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ನಾನು ಒತ್ತಾಯಿಸುತ್ತೇನೆ" ಎಂದು ನಮಲ್ ರಾಜಪಕ್ಸೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಪ್ರತಿಭಟನೆ: ಸಾಮಾಜಿಕ ಜಾಲತಾಣ ಬಂದ್!!

ಶ್ರೀಲಂಕಾ ಪ್ರಸ್ತುತ ವಿದೇಶಿ ವಿನಿಮಯ ಕೊರತೆಯನ್ನು ಎದುರಿಸುತ್ತಿದೆ, ಇದು ಆಹಾರ, ಇಂಧನ, ವಿದ್ಯುತ್ ಮತ್ತು ಅನಿಲದ ಕೊರತೆಗೆ ಕಾರಣವಾಗಿದೆ. ಆರ್ಥಿಕ ಸಹಾಯಕ್ಕಾಗಿ ಸ್ನೇಹಪರ ರಾಷ್ಟ್ರಗಳ ಸಹಾಯವನ್ನು ಕೋರಿದೆ. ಶ್ರೀಲಂಕಾವು ಕನಿಷ್ಟ 13 ಗಂಟೆಗಳ ದೈನಂದಿನ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗಿದೆ. ಶ್ರೀಲಂಕಾದ ಕರೆನ್ಸಿಯು ಮಾರ್ಚ್ 8 ರಿಂದ US ಡಾಲರ್ ವಿರುದ್ಧ ಸುಮಾರು SLR 90 ರಷ್ಟು ಅಪಮೌಲ್ಯಗೊಂಡಿದೆ.


Stay up to date on all the latest ವಿದೇಶ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp