ವಜೀರಿಸ್ತಾನದಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳಿಂದ ಭಯೋತ್ಪಾದಕ ಕಮಾಂಡರ್ ಹತ್ಯೆ

ದೇಶದ ವಾಯುವ್ಯ ಭಾಗದಲ್ಲಿ ಗುಂಡಿನ ಚಕಮಕಿಯ ಸಮಯದಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳು ಭಯೋತ್ಪಾದಕ ಕಮಾಂಡರ್ ಅನ್ನು ಕೊಂದಿದ್ದಾರೆ ಎಂದು ಸೇನೆ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಪೇಶಾವರ: ದೇಶದ ವಾಯುವ್ಯ ಭಾಗದಲ್ಲಿ ಗುಂಡಿನ ಚಕಮಕಿಯ ಸಮಯದಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳು ಭಯೋತ್ಪಾದಕ ಕಮಾಂಡರ್ ಅನ್ನು ಕೊಂದಿದ್ದಾರೆ ಎಂದು ಸೇನೆ ತಿಳಿಸಿದೆ.

ಡಿಸೆಂಬರ್ 2 ರಂದು ಉತ್ತರ ವಜಿರಿಸ್ತಾನದ ಸಾಮಾನ್ಯ ಪ್ರದೇಶವಾದ ಶೇವಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮುಹಮ್ಮದ್ ನೂರ್ ಅಲಿಯಾಸ್ ಸರಕೈ ಎಂಬಾತ ಸಾವಿಗೀಡಾಗಿದ್ದಾನೆ ಎಂದು ಸೇನೆಯ ಮಾಧ್ಯಮ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಶನಿವಾರ ತಿಳಿಸಿದೆ.

ಭದ್ರತಾ ಪಡೆಗಳ ವಿರುದ್ಧ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ಹಲವಾರು ಅಪಹರಣ ಮತ್ತು ಸುಲಿಗೆ ಪ್ರಕರಣಗಳಲ್ಲಿ ನೂರ್ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಗೆ ಬೇಕಾಗಿದ್ದ.

ತೀವ್ರವಾದ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ಭಯೋತ್ಪಾದಕ ಕಮಾಂಡರ್ ಮೊಹಮ್ಮದ್ ನೂರ್ ಅಲಿಯಾಸ್ ಸರಕೈ ಹತ್ಯೆಯಾಗಿದ್ದಾನೆ. ಹತ್ಯೆಗೀಡಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಕಳೆದ ತಿಂಗಳು, ಖೈಬರ್-ಪಖ್ತುಂಖ್ವಾದ ದಕ್ಷಿಣ ವಜಿರಿಸ್ತಾನ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಕಾಳಗದಲ್ಲಿ ಪಾಕಿಸ್ತಾನದ ಸೇನಾ ಯೋಧ ಹುತಾತ್ಮರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com