ಲಂಕ ಆರ್ಥಿಕ ಬಿಕ್ಕಟ್ಟು: ಈ ವಾರ ಹೊಸ ಪ್ರಧಾನಿ ನೇಮಕ - ಶ್ರೀಲಂಕಾ ಅಧ್ಯಕ್ಷ ಗೋಟಬಯ
ಭೀಕರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಇದೀಗ ಸರ್ಕಾರ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇದರ ಮಧ್ಯೆ ಈ ವಾರದಲ್ಲಿ ನೂತನ ಪ್ರಧಾನಿಯನ್ನು ನೇಮಿಸಲಾಗುತ್ತದೆ ಎಂದು ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹೇಳಿದ್ದಾರೆ.
Published: 11th May 2022 11:30 PM | Last Updated: 11th May 2022 11:30 PM | A+A A-

ಗೋಟಬಯ ರಾಜಪಕ್ಸೆ
ಕೊಲಂಬೊ: ಭೀಕರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಇದೀಗ ಸರ್ಕಾರ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇದರ ಮಧ್ಯೆ ಈ ವಾರದಲ್ಲಿ ನೂತನ ಪ್ರಧಾನಿಯನ್ನು ನೇಮಿಸಲಾಗುತ್ತದೆ ಎಂದು ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹೇಳಿದ್ದಾರೆ.
ಹೊಸ ಪ್ರಧಾನಿ ಮತ್ತು ಕ್ಯಾಬಿನೆಟ್ ಜೊತೆಗೆ ಸಾಂವಿಧಾನಿಕ ಸುಧಾರಣೆಗಳನ್ನು ಪರಿಚಯಿಸುವ ಯೋಜನೆಗಳನ್ನು ಘೋಷಿಸುವುದಾಗಿ ಹೇಳಿದರು. ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಅಧ್ಯಕ್ಷ ಗೋಟಬಯ ಅವರು ಸಂಸತ್ತಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಸಂವಿಧಾನದ 19ನೇ ತಿದ್ದುಪಡಿಯ ವಿಷಯವನ್ನು ಜಾರಿಗೆ ತರಲು ಸಂವಿಧಾನಾತ್ಮಕ ತಿದ್ದುಪಡಿಯನ್ನು ತರಲಾಗುವುದು ಎಂದು ಹೇಳಿದರು.
ಯಾವುದೇ ರಾಜಪಕ್ಸೆಗಳಿಲ್ಲದೆ ಯುವ ಕ್ಯಾಬಿನೆಟ್ ಅನ್ನು ನೇಮಿಸುತ್ತೇನೆ ಎಂದು ಗೋಟಬಯ ಹೇಳಿದ್ದು ದೇಶವು ಅರಾಜಕತೆಗೆ ಜಾರುವುದನ್ನು ತಡೆಯಲು ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ಪ್ರಾರಂಭಿಸುವುದಾಗಿ ಹೇಳಿದರು.
ಇದನ್ನೂ ಓದಿ: ಎರಡು ದಿನದಲ್ಲಿ ಹೊಸ ಸರ್ಕಾರ ರಚನೆಯಾಗದಿದ್ದರೆ ಶ್ರೀಲಂಕಾದ ಆರ್ಥಿಕತೆ 'ಪತನ': ಸೆಂಟ್ರಲ್ ಬ್ಯಾಂಕ್
ನೂತನ ಸರ್ಕಾರದ ಪ್ರಧಾನಿಗೆ ಹೊಸ ಕಾರ್ಯಕ್ರಮವನ್ನು ರೂಪಿಸಲು ಮತ್ತು ಈ ದೇಶವನ್ನು ಮುನ್ನಡೆಸಲು ಅವಕಾಶವನ್ನು ನೀಡಲಾಗುವುದು ಎಂದು ಗೋಟಬಯ ಹೇಳಿದರು.
ಶ್ರೀಲಂಕಾ ಅಧ್ಯಕ್ಷ ಗೋಟಬಯ ಅವರ ಹಿರಿಯ ಸಹೋದರ, ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಿದ ನಂತರ ಕಳೆದ ಎರಡು ದಿನಗಳಿಂದ ಸರ್ಕಾರವಿಲ್ಲದೇ ಸರ್ವಪಕ್ಷ ಮಧ್ಯಂತರ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದೆ. ಕ್ಯಾಬಿನೆಟ್ ಇಲ್ಲದೆ ದೇಶವನ್ನು ನಡೆಸಲು ಅಧ್ಯಕ್ಷರು ಸಾಂವಿಧಾನಿಕ ಅಧಿಕಾರ ಹೊಂದಿದ್ದಾರೆ.
1948ರಲ್ಲಿ ಬ್ರಿಟನ್ನಿಂದ ಸ್ವಾತಂತ್ರ್ಯ ಪಡೆದ ನಂತರ ಶ್ರೀಲಂಕಾ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ವಿದೇಶಿ ಕರೆನ್ಸಿಯ ಕೊರತೆಯಿಂದಾಗಿ ಬಿಕ್ಕಟ್ಟು ಉಂಟಾಗುತ್ತದೆ. ಇದರರ್ಥ ದೇಶವು ಪ್ರಧಾನ ಆಹಾರಗಳು ಮತ್ತು ಇಂಧನದ ಆಮದುಗಳಿಗೆ ಪಾವತಿಸಲು ಸಾಧ್ಯವಿಲ್ಲ, ಇದು ತೀವ್ರ ಕೊರತೆ ಮತ್ತು ಹೆಚ್ಚಿನ ಬೆಲೆಗಳಿಗೆ ಕಾರಣವಾಗುತ್ತದೆ.