ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ಕನ್ನಡದ ಹಿರಿಮೆ ಹೆಚ್ಚಿಸಿದ ತುಮಕೂರು ಮೂಲದ ಸಂಸದ
ನಮ್ಮ ಕನ್ನಡ ಕಂಪು ದೇಶಗಳಲ್ಲದೇ ವಿದೇಶಗಳಲೆಲ್ಲಾ ಪಸರಿಸುತ್ತಿದೆ. ಅಲ್ಲಿರುವ ಕನ್ನಡಿಗರು ಕನ್ನಡದಲ್ಲೇ ಮಾತನಾಡಿ ಕನ್ನಡದ ಹಿರಿಮೆ, ಗರಿಮೆಯನ್ನು ಸಾರುತ್ತಿದ್ದಾರೆ. ಈಗ ಈ ಸಾಲಿಗೆ ಕೆನಡಾದ ಸಂಸದ ಕನ್ನಡಿಗ ಚಂದ್ರ ಆರ್ಯ...
Published: 20th May 2022 08:19 PM | Last Updated: 20th May 2022 08:19 PM | A+A A-

ಚಂದ್ರ ಆರ್ಯ
ಕೆನಡಾ: ನಮ್ಮ ಕನ್ನಡ ಕಂಪು ದೇಶಗಳಲ್ಲದೇ ವಿದೇಶಗಳಲೆಲ್ಲಾ ಪಸರಿಸುತ್ತಿದೆ. ಅಲ್ಲಿರುವ ಕನ್ನಡಿಗರು ಕನ್ನಡದಲ್ಲೇ ಮಾತನಾಡಿ ಕನ್ನಡದ ಹಿರಿಮೆ, ಗರಿಮೆಯನ್ನು ಸಾರುತ್ತಿದ್ದಾರೆ. ಈಗ ಈ ಸಾಲಿಗೆ ಕೆನಡಾದ ಸಂಸದ ಕನ್ನಡಿಗ ಚಂದ್ರ ಆರ್ಯ ಸೇರ್ಪಡೆಗೊಂಡಿದ್ದಾರೆ.
ಚಂದ್ರ ಆರ್ಯ ಅವರು ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಕನ್ನಡಾಭಿಮಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನು ಓದಿ: ಕೆನಡಾದಲ್ಲಿ ಗುಂಡಿಟ್ಟು 21 ವರ್ಷದ ಭಾರತೀಯ ವಿದ್ಯಾರ್ಥಿ ಹತ್ಯೆ
ಸಭಾಪತಿ ಹಾಗೂ ಅಲ್ಲಿ ನೆರೆದಿದ್ದವರ ಎದುರು ಮಾನ್ಯ ಸಭಾಪತಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ, ಕರ್ನಾಟಕ ರಾಜ್ಯದ, ತುಮಕೂರು ಜಿಲ್ಲೆಯ, ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ೫ ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದಿದ್ದಾರೆ.
I spoke in my mother tongue (first language) Kannada in Canadian parliament.
— Chandra Arya (@AryaCanada) May 19, 2022
This beautiful language has long history and is spoken by about 50 million people.
This is the first time Kannada is spoken in any parliament in the world outside of India. pic.twitter.com/AUanNlkETT