social_icon

ಜೋ ಬಿಡೆನ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ: ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ!

ಜಿ20 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡನ್ ಮುಖಾಮುಖಿಯಾಗಿದ್ದು ನಿರ್ಣಾಯಕ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳು ಸೇರಿದಂತೆ ಭಾರತ-ಅಮೆರಿಕಾ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಿತಿಗಳನ್ನು ಪರಿಶೀಲಿಸಿದರು.

Published: 15th November 2022 05:36 PM  |   Last Updated: 15th November 2022 05:41 PM   |  A+A-


ಪ್ರಧಾನಿ ಮೋದಿ-ಜೋ ಬಿಡೆನ್

Posted By : vishwanath
Source : PTI

ನವದೆಹಲಿ: ಜಿ20 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡನ್ ಮುಖಾಮುಖಿಯಾಗಿದ್ದು ನಿರ್ಣಾಯಕ, ಉದಯೋನ್ಮುಖ ತಂತ್ರಜ್ಞಾನಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಕ್ಷೇತ್ರಗಳು ಸೇರಿದಂತೆ ಭಾರತ-ಅಮೆರಿಕಾ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಿತಿಗಳನ್ನು ಪರಿಶೀಲಿಸಿದರು.

ಇಂಡೋನೇಷ್ಯಾದ ಬಾಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿದೆ. ಜಿ20 ರಾಷ್ಟ್ರಗಳ ಪ್ರಧಾನಿಗಳು, ಅಧ್ಯಕ್ಷರು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಜೋ ಬಿಡಿನ್ ಭೇಟಿಯಾಗಿದ್ದು ಉಕ್ರೇನ್ ಸಂಘರ್ಷ ಮತ್ತು ಅದರ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಆದಾಗ್ಯೂ, ಉಭಯ ನಾಯಕರು ತಮ್ಮ ಸಭೆಯಲ್ಲಿ ಪ್ರಸ್ತುತ ಜಾಗತಿಕ ಮತ್ತು ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.

ಉಭಯ ನಾಯಕರು 'ನಿರ್ಣಾಯಕ' ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಭವಿಷ್ಯ-ಆಧಾರಿತ ಕ್ಷೇತ್ರಗಳು, ಸುಧಾರಿತ ಕಂಪ್ಯೂಟಿಂಗ್, ಕೃತಕ ಬುದ್ಧಿಮತ್ತೆ ಇತ್ಯಾದಿಗಳಲ್ಲಿ ಸಹಕಾರ ಸೇರಿದಂತೆ ಆಳವಾದ ಭಾರತ-ಯುಎಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಪರಿಶೀಲಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಜಿ-20 ಶೃಂಗಸಭೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಭಾರತ-ಅಮೆರಿಕಾ ನಡುವೆ ಆಳವಾದ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ನಿರಂತರ ಸಹಕಾರಕ್ಕಾಗಿ ಅಧ್ಯಕ್ಷ ಜೋ ಬಿಡನ್ ಅವರಿಗೆ ಪ್ರಧಾನಿ ಮೋದಿ ಅವರು ಧನ್ಯವಾದ ಅರ್ಪಿಸಿದರು. ಭಾರತದ G20 ಪ್ರೆಸಿಡೆನ್ಸಿ ಅವಧಿಯಲ್ಲಿ ಉಭಯ ದೇಶಗಳು ನಿಕಟವಾಗಿ ಸಮನ್ವಯವನ್ನು ಮುಂದುವರೆಸುತ್ತವೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.'ಕ್ವಾಡ್' ಮತ್ತು 'ಐ2ಯು2' ನಂತಹ ಹೊಸ ಗುಂಪುಗಳಲ್ಲಿ ಭಾರತ ಮತ್ತು ಅಮೆರಿಕಾ ನಡುವಿನ ನಿಕಟ ಸಹಕಾರದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.


Stay up to date on all the latest ವಿದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp