ಯುಕೆ ಭಾರತೀಯ ಹೈಕಮೀಷನರ್ ಗೆ ಸ್ಕಾಟ್ಲೆಂಡ್ ಗುರುದ್ವಾರ ಪ್ರವೇಶಕ್ಕೆ ನಿರ್ಬಂಧ!

ಇಂಗ್ಲೆಂಡ್ ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರಿಗೆ ಶುಕ್ರವಾರ ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿರುವ ಗುರುದ್ವಾರ ಪ್ರವೇಶಿಸದಂತೆ ತಡೆಯಲಾಗಿದೆ.
ಯುಕೆ ಭಾರತೀಯ ಹೈಕಮೀಷನರ್ ವಿಕ್ರಮ್ ದೂರೈಸ್ವಾಮಿ
ಯುಕೆ ಭಾರತೀಯ ಹೈಕಮೀಷನರ್ ವಿಕ್ರಮ್ ದೂರೈಸ್ವಾಮಿ
Updated on

ಗ್ಲಾಸ್ಗೋ: ಇಂಗ್ಲೆಂಡ್ ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರಿಗೆ ಶುಕ್ರವಾರ ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿರುವ ಗುರುದ್ವಾರ ಪ್ರವೇಶಿಸದಂತೆ ತಡೆಯಲಾಗಿದೆ. ಯುಕೆ ಸಿಖ್ ಯೂತ್ ಇನ್‌ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದ ಪ್ರಕಾರ, ಖಲಿಸ್ತಾನಿ ಪರ ಕಾರ್ಯಕರ್ತರೊಬ್ಬರು ಗ್ಲಾಸ್ಗೋ ಗುರುದ್ವಾರ ಪ್ರವೇಶಿಸದಂತೆ ದೊರೈಸ್ವಾಮಿ ಅವರನ್ನು ತಡೆಯುತ್ತಿರುವುದು ಕಂಡುಬಂದಿದೆ.

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಕಲಹದ ನಡುವೆ ಈ ಘಟನೆ ನಡೆದಿದೆ. ಕೆನಡಾ ಮತ್ತಿತರ ಸ್ಥಳಗಳಲ್ಲಿ ಭಾರತೀಯರು ಸಿಖ್ಖರನ್ನು ನೋಯಿಸುತ್ತಿದ್ದಾರೆ, ಗ್ಲಾಸ್ಗೋದಲ್ಲಿ ಮಾಡಿದಂತೆ ಪ್ರತಿಯೊಬ್ಬ ಸಿಖ್ಖರು ಯಾವುದೇ ಭಾರತೀಯ ರಾಯಭಾರಿ ವಿರುದ್ಧ ಪ್ರತಿಭಟಿಸಬೇಕು ಎಂದು ವ್ಯಕ್ತಿ ಹೇಳುವುದನ್ನು ವೀಡಿಯೊದಲ್ಲಿ ಕೇಳಲಾಗಿದೆ. ಭಾರತೀಯ ಅಧಿಕಾರಿಗಳು ತಮ್ಮ ಅಧಿಕೃತ ಸಾಮರ್ಥ್ಯದಲ್ಲಿ ಗುರುದ್ವಾರಕ್ಕೆ ಭೇಟಿ ನೀಡುವುದರ ಮೇಲೆ ನಿರಂತರ ನಿಷೇಧವಿದೆ ಎಂದು 'ಸಿಖ್ ಯೂತ್ ಯುಕೆ' ಹೇಳಿಕೊಂಡಿದೆ.

ಪಾರ್ಕಿಂಗ್ ಪ್ರದೇಶದಲ್ಲಿ ಹೈಕಮಿಷನರ್ ಕಾರಿನ ಬಳಿ ಇಬ್ಬರು ವ್ಯಕ್ತಿಗಳು ಇರುವುದನ್ನು ವೀಡಿಯೊ ತೋರಿಸುತ್ತದೆ. ಅವರಲ್ಲಿ ಒಬ್ಬರು ಒಳಗಿನಿಂದ ಲಾಕ್ ಆಗಿದ್ದ ಕಾರಿನ ಬಾಗಿಲನ್ನು ತೆರೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಹೈಕಮಿಷನರ್ ಅವರ ಕಾರು ಗುರುದ್ವಾರ ಆವರಣದಿಂದ ಹೊರಡುವುದನ್ನು ವೀಡಿಯೊ ತೋರಿಸುತ್ತದೆ. ಗುರುದ್ವಾರಕ್ಕೆ ಭೇಟಿ ನೀಡುವ ಯಾವುದೇ ಭಾರತೀಯ ರಾಯಭಾರಿ ಅಥವಾ ಯಾವುದೇ ಭಾರತೀಯ ಸರ್ಕಾರಿ ಅಧಿಕಾರಿಯನ್ನು ಹೀಗೆಯೇ ನಡೆಸಿಕೊಳ್ಳಲಾಗುತ್ತದೆ ಎಂದು ಇನ್ನೊಬ್ಬ ವ್ಯಕ್ತಿ ಕ್ಯಾಮೆರಾದೊಂದಿಗೆ ಮಾತನಾಡುವುದನ್ನು ವೀಡಿಯೊ ತೋರಿಸುತ್ತದೆ.

ಕೆನಡಾದಲ್ಲಿ ಏನು ನಡೆಯುತ್ತಿದೆ ಎಂದು ನಮಗೆ ತಿಳಿದಿದೆ. ಕೆನಡಾದ ಪ್ರಧಾನಿ ಭಾರತವನ್ನು ಬಹಿರಂಗವಾಗಿ ಖಂಡಿಸಿದ್ದಾರೆ ಮತ್ತು ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com