social_icon

ಪಾಕಿಸ್ತಾನ ಮೂಲದ ಎಲ್ ಇಟಿ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಜಾಗತಿಕ ಭಯೋತ್ಪಾದಕ: ವಿಶ್ವಸಂಸ್ಥೆ ಘೋಷಣೆ

ಪ್ರಮುಖ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತೊಯ್ಬಾ(LeT)ದ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಿದೆ. ಅಲ್ಲದೆ ಆತನಿಗೆ ಸಂಬಂಧಪಟ್ಟ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಆತನ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ಪ್ರಯಾಣಕ್ಕೆ ನಿಷೇಧ ಹೇರಿದೆ.

Published: 17th January 2023 09:34 AM  |   Last Updated: 17th January 2023 05:29 PM   |  A+A-


Abdul Rehaman Makki

ಅಬ್ದುಲ್ ರೆಹಮಾನ್ ಮಕ್ಕಿ

Posted By : Sumana Upadhyaya
Source : The New Indian Express

ಯುನೈಟೆಡ್ ನೇಷನ್ಸ್: ಪ್ರಮುಖ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತೊಯ್ಬಾ(LeT)ದ ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆ ಜಾಗತಿಕ ಭಯೋತ್ಪಾದಕ ಎಂದು ಗುರುತಿಸಿದೆ. ಅಲ್ಲದೆ ಆತನಿಗೆ ಸಂಬಂಧಪಟ್ಟ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಆತನ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವಂತೆ ಮತ್ತು ಪ್ರಯಾಣಕ್ಕೆ ನಿಷೇಧ ಹೇರಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267(UNSC) ಅಲ್ ಖೈದಾ ಅನುಮೋದನೆ ಸಮಿತಿಯು ಪಾಕಿಸ್ತಾನದ ಜೆಯುಡಿ/ ಎಲ್ ಇಟಿ ಮುಖ್ಯಸ್ಥ ಹಫೀಝ್ ಮುಹಮ್ಮದ್ ಸಯೀದ್ ನ ಸಂಬಂಧಿ 68 ವರ್ಷದ ಮಕ್ಕಿಯನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ನಿನ್ನೆ ಹಣೆಪಟ್ಟೆ ನೀಡಿದೆ. ಭಾರತ ಮತ್ತು ಅಮೆರಿಕ ಆತನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸುವಂತೆ ವಿಶ್ವಸಂಸ್ಥೆಗೆ ಜಂಟಿ ಪ್ರಸ್ತಾವನೆ ಸಲ್ಲಿಸಿದ್ದವು. ಆರಂಭದಲ್ಲಿ ಜಂಟಿ ಪ್ರಸ್ತಾವನೆಗೆ ಸಹಿ ಹಾಕಿದ್ದ ಚೀನಾ ನಂತರ ತನ್ನ ನಿಲುವನ್ನು ಬದಲಿಸಿ ಪ್ರಸ್ತಾವನೆಯಿಂದ ಹಿಂದೆ ಸರಿದಿತ್ತು.

ಮಕ್ಕಿ ಮತ್ತು ಇತರ ಎಲ್ ಇಟಿ ಉಗ್ರರು ಭಯೋತ್ಪಾದನೆ ಕುಕೃತ್ಯಗಳಿಗೆ ಹಣ ಸಂಗ್ರಹಿಸುವುದು, ಯುವಕರನ್ನು ಪ್ರಚೋದಿಸಿ ನೇಮಕಾತಿ ಮಾಡಿಕೊಳ್ಳುವುದು, ಯುವಕರನ್ನು ಪ್ರಚೋದಿಸಿ ಭಾರತ ವಿರುದ್ಧ ಭಯೋತ್ಪಾದನೆ ಚಟುವಟಿಕೆ ನಡೆಸಲು ಪ್ರೋತ್ಸಾಹ ನೀಡುವುದು ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶವಿರೋಧಿ ಚಟುವಟಿಕೆ ನಡೆಸಲು ಯುವಕರಿಗೆ ಪ್ರೇರಣೆ ನೀಡುವ ಕೆಟ್ಟ ಕೆಲಸಗಳಲ್ಲಿ ತೊಡಗಿದ್ದರು ಎಂದು ಸಮಿತಿ ಹೇಳುತ್ತದೆ. ಮಕ್ಕಿಯನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸಲು ಕಾರಣವೇನು ಎಂದು ಹೇಳಿ ಹೇಳಿಕೆಯನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ.

ಅಬ್ದುಲ್ ರೆಹಮಾನ್ ಮಕ್ಕಿ ಜನಿಸಿದ್ದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಲ್ಪುರದಲ್ಲಿ. ಈತ ಎಲ್ ಇಟಿ ಉಗ್ರಗಾಮಿ ಸಂಘಟನೆಯ ಉಪ ಮುಖ್ಯಸ್ಥ ಮತ್ತು ಜೆಯುಡಿ/ಎಲ್ ಇಟಿ ಸಂಘಟನೆಯ ರಾಜಕೀಯ ವ್ಯವಹಾರಗಳ ಮುಖ್ಯಸ್ಥನಾಗಿದ್ದಾನೆ. ಈತ ಎಲ್ ಇಟಿಯ ವಿದೇಶಾಂಗ ಸಂಬಂಧ ಇಲಾಖೆಯ ಮತ್ತು ಅದರ ಆಡಳಿತ ಅಂಗ ಶುರದ ಸದಸ್ಯನು ಕೂಡ ಹೌದು.

ಇದನ್ನೂ ಓದಿ: 'ಭಾರತದೊಂದಿಗಿನ ಮೂರು ಯುದ್ಧಗಳಿಂದಾಗಿ....' ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದೇವೆ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

UNSC 1267 ನಿರ್ಬಂಧಗಳ ಸಮಿತಿಯು ಮಕ್ಕಿಯನ್ನು "ಭಾರತ ಸರ್ಕಾರಕ್ಕೆ ಬೇಕಾದ ವ್ಯಕ್ತಿ" ಎಂದು ಹೇಳಿದೆ, "ಹಣಕಾಸು, ಯೋಜನೆ ಸುಗಮಗೊಳಿಸುವಿಕೆ, ಸಿದ್ಧತೆಗಳು ಅಥವಾ ಸಂಯೋಜಿತ ಕ್ರಿಯೆಗಳು ಅಥವಾ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಗಾಗಿ ISIL ಅಥವಾ ಅಲ್-ಖೈದಾದೊಂದಿಗೆ ಸಂಬಂಧ ಹೊಂದಿದೆಯೆಂದು ಪಟ್ಟಿಮಾಡಲಾಗಿದೆ. 

ಮಕ್ಕಿಯನ್ನು ಮೇ 15, 2019 ರಂದು ಪಾಕಿಸ್ತಾನ ಸರ್ಕಾರವು ಬಂಧಿಸಿ ಲಾಹೋರ್‌ನಲ್ಲಿ ಗೃಹಬಂಧನದಲ್ಲಿರಿಸಲಾಗಿತ್ತು. "2020 ರಲ್ಲಿ, ಪಾಕಿಸ್ತಾನಿ ನ್ಯಾಯಾಲಯವು ಮಕ್ಕಿಯನ್ನು ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಅಪರಾಧಿ ಎಂದು ಘೋಷಿಸಿ ಅವನಿಗೆ ಜೈಲು ಶಿಕ್ಷೆ ವಿಧಿಸಿತು ಎಂದು ನಿರ್ಬಂಧಗಳ ಸಮಿತಿ ಹೇಳಿದೆ.

ಪಾಕಿಸ್ತಾನ ಸ್ನೇಹಿತ ಚೀನಾ, ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಪಟ್ಟಿ ಮಾಡಲು ಭಾರತ ಮತ್ತು ಅದರ ಮಿತ್ರರಾಷ್ಟ್ರಗಳ ಬಿಡ್‌ಗಳನ್ನು ಪದೇ ಪದೇ ತಡೆಹಿಡಿಯುತ್ತಿದೆ. ಕಳೆದ ವರ್ಷ ಜೂನ್‌ನಲ್ಲಿ, 1267 ಅಲ್-ಖೈದಾ ಅಡಿಯಲ್ಲಿ JUD/LeT ಮುಖ್ಯಸ್ಥ ಹಫೀಜ್ ಮುಹಮ್ಮದ್ ಸಯೀದ್‌ನ ಸಂಬಂಧಿ ಮಕ್ಕಿಯನ್ನು ಪಟ್ಟಿ ಮಾಡಲು ಭಾರತ ಮತ್ತು ಯುಎಸ್ ಜಂಟಿ ಪ್ರಸ್ತಾವನೆಯನ್ನು ಕೊನೆಯ ಕ್ಷಣದಲ್ಲಿ ಚೀನಾ ತಡೆಹಿಡಿದಿತ್ತು. 


Stay up to date on all the latest ವಿದೇಶ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp