social_icon

ಒಡಿಶಾ ರೈಲು ದುರಂತ: ಆಸ್ಟ್ರೇಲಿಯಾ, ಪಾಕ್ ಸೇರಿ ಹಲವು ರಾಷ್ಟ್ರಗಳ ನಾಯಕರಿಂದ ತೀವ್ರ ಸಂತಾಪ

ಒಡಿಶಾ ಬಾಲಸೋರ್'ನಲ್ಲಿ ಕಂಡು ಕೇಳರಿಯದಂತೆ ನಡೆದ ಭೀಕರ ರೈಲು ದುರಂತದಲ್ಲಿ 268ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ದುರ್ಘಟನೆ ದೇಶ-ವಿದೇಶಗಳಲ್ಲಿನ ಜನರ ಮನ ಕಲುಕುವಂತೆ ಮಾಡಿದೆ.

Published: 03rd June 2023 02:50 PM  |   Last Updated: 03rd June 2023 05:49 PM   |  A+A-


A view of Odisha's Balasore triple train crash.

ಹಳಿತಪ್ಪಿ ಉರುಳಿ ಬಿದ್ದಿರುವ ರೈಲುಗಳು.

Posted By : Manjula VN
Source : Online Desk

ನವದೆಹಲಿ: ಒಡಿಶಾ ಬಾಲಸೋರ್'ನಲ್ಲಿ ಕಂಡು ಕೇಳರಿಯದಂತೆ ನಡೆದ ಭೀಕರ ರೈಲು ದುರಂತದಲ್ಲಿ 268ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ದುರ್ಘಟನೆ ದೇಶ-ವಿದೇಶಗಳಲ್ಲಿನ ಜನರ ಮನ ಕಲುಕುವಂತೆ ಮಾಡಿದೆ.

ರೈಲು ದುರಂತ ಘಟನೆಗೆ ಶ್ರೀಲಂಕಾ, ಆಸ್ಟ್ರೇಲಿಯಾ, ಕೆನಡಾ, ಪಾಕಿಸ್ತಾನ, ಟರ್ಕಿ ಹಾಗೂ ತೈವಾನ್​ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ, 'ನಾವು ನಿಮ್ಮೊಂದಿಗಿದ್ದೇವೆ' ಎಂದು ಧೈರ್ಯ ತುಂಬಿದ್ದಾರೆ.

ದುರಂತದ ಬಗ್ಗೆ ಟ್ವೀಟ್​ ಮಾಡಿ ಕಳವಳ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವ ಪೆನ್ನಿ ವಾಂಗ್ ಅವರು, ವಿನಾಶಕಾರಿ ರೈಲು ಅಪಘಾತ ಹಲವು ಪ್ರಾಣಗಳನ್ನು ಬಲಿ ಪಡೆದಿದೆ. ಇದು ದುಃಖಕರ ಸಂಗತಿ. ಘಟನೆಯ ಬಗ್ಗೆ ಸಂತಾಪವಿದೆ ಎಂದು ಹೇಳಿದ್ದಾರೆ. ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ. ಈ ದುಃಖದ ಸಮಯದಲ್ಲಿ ಶ್ರೀಲಂಕಾ ಭಾರತದೊಂದಿಗೆ ನಿಂತಿರುತ್ತದೆ ಎಂದು ಹೇಳಿದ್ದಾರೆ.

 ತೈವಾನ್ ಅಧ್ಯಕ್ಷ ತ್ಸೈ ಇಂಗ್-ವೆನ್ ಅವರೂ ಕೂಡ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಭಾರತದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಸಂತ್ರಸ್ತರಾದ ಪ್ರತಿಯೊಬ್ಬರ ಗುಣಮುಖಕ್ಕಾಗಿ ಪ್ರಾರ್ಥಿಸುವೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುವೆ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಒಡಿಶಾ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಪೂರ್ಣ

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ರೈಲು ದುರಂತಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ತ್ರಿವಳಿ ರೈಲು ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ದುಃಖಕ್ಕೀಡು ಮಾಡಿದೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಅಪಘಾತದ ಚಿತ್ರಗಳು ಮತ್ತು ವರದಿಗಳು ನನ್ನ ಹೃದಯವನ್ನು ಕಲುಕಿದವು. ಈ ಕಷ್ಟದ ಸಮಯದಲ್ಲಿ ಕೆನಡಿಯನ್ನರು ಭಾರತದ ಜನರೊಂದಿಗೆ ನಿಂತಿರುತ್ತಾರೆ ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಒಡಿಶಾ ರೈಲು ಅಪಘಾತದಲ್ಲಿ ಬಲಿಯಾದವರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುಃಖದ ಸಮಯದಲ್ಲಿ ಶ್ರೀಲಂಕಾ ಭಾರತದೊಂದಿಗೆ ನಿಲ್ಲುತ್ತೇವೆಂದು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಹೇಳಿದ್ದಾರೆ.

ಭಾರತದಲ್ಲಿನ ರೈಲು ಅಪಘಾತದಲ್ಲಿ ನೂರಾರು ಜೀವಗಳನ್ನು ಕಳೆದುಕೊಂಡಿರುವ ತೀವ್ರ ನೋವು ತಂದಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇವೆಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಹೇಳಿದ್ದಾರೆ.


Stay up to date on all the latest ವಿದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp