ಅಮೆರಿಕದಲ್ಲಿ ಕಾರ್ಯಕ್ರಮದ ಮಧ್ಯೆ ರಾಹುಲ್ ಗಾಂಧಿಯನ್ನು ಹೀಯಾಳಿಸಿದ ಖಲಿಸ್ತಾನಿ ಬೆಂಬಲಿಗರು, ವಿಡಿಯೋ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದು ಕ್ಯಾಲಿಫೋರ್ನಿಯಾದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕೆಲವರು ಖಲಿಸ್ತಾನಿ ಬಾವುಟಗಳನ್ನು ಬೀಸುತ್ತಾ ಖಲಿಸ್ತಾನಕ್ಕಾಗಿ ಆಗ್ರಹಿಸಿ ಘೋಷಣೆಗಳೂ ಕೂಗಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಕ್ಯಾಲಿಫೋರ್ನಿಯಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದು ಕ್ಯಾಲಿಫೋರ್ನಿಯಾದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕೆಲವರು ಖಲಿಸ್ತಾನಿ ಬಾವುಟಗಳನ್ನು ಬೀಸುತ್ತಾ ಖಲಿಸ್ತಾನಕ್ಕಾಗಿ ಆಗ್ರಹಿಸಿ ಘೋಷಣೆಗಳೂ ಕೂಗಿದರು.

ಅಮೆರಿಕ ಮೂಲದ ಖಲಿಸ್ತಾನಿ ಸಂಘಟನೆ ಎಸ್‌ಎಫ್‌ಜೆ ಇದರ ಹೊಣೆ ಹೊತ್ತುಕೊಂಡಿದೆ. ಘಟನೆಯ ವಿಡಿಯೋವನ್ನು ಎಸ್‌ಎಫ್‌ಜೆ ಮುಖ್ಯಸ್ಥ ಗುರುಪತ್‌ವಂತ್ ಸಿಂಗ್ ಪನ್ನು ಬಿಡುಗಡೆ ಮಾಡಿದ್ದಾರೆ. 1984ರ ಸಿಖ್ ದಂಗೆಗೆ ಸಂಬಂಧಿಸಿದಂತೆ ಗಾಂಧಿ ಕುಟುಂಬದ ವಿರುದ್ಧ ಘೋಷಣೆಗಳನ್ನು ಎತ್ತಲು ಪ್ರಾರಂಭಿಸಿದರು. ಅಂದು ನಾವು ಏನು ಮಾಡಿದ್ದೇವೆ ಎಂಬುದನ್ನು ಎಲ್ಲರೂ ನೋಡಿದ್ದಾರೆ ಎಂದು ಅವರು ಹೇಳಿದರು? ರಾಹುಲ್ ಗಾಂಧಿ ಅಮೆರಿಕದಲ್ಲಿ ಎಲ್ಲಿಗೆ ಹೋಗುತ್ತಾರೆ. ಖಲಿಸ್ತಾನ್ ಬೆಂಬಲಿಗ ಸಿಖ್ಖರು ಅವರ ಮುಂದೆ ನಿಲ್ಲುತ್ತಾರೆ. ಇನ್ನು ನಮ್ಮ ಮುಂದಿನ ಟಾರ್ಗೆಟ್ ಮೋದಿ ಜೂನ್ 22ಕ್ಕೆ ಎಂದು ಹೇಳಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ
ರಾಹುಲ್ ಗಾಂಧಿ ನಿನ್ನೆ ಅಮೆರಿಕಕ್ಕೆ ತಲುಪಿದ್ದು ಇಲ್ಲಿ ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಮಾತನಾಡಿದರು. ರಾಹುಲ್ ಇಲ್ಲಿನ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರು ವಾಷಿಂಗ್ಟನ್ ಡಿಸಿಯಲ್ಲಿ ಸಂಸದರು ಮತ್ತು ಚಿಂತಕರ ಜೊತೆಗಿನ ಸಭೆಗಳ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

52 ವರ್ಷ ವಯಸ್ಸಿನ ಕಾಂಗ್ರೆಸ್ ನಾಯಕ ಅವರು ತಮ್ಮ ವಾರದ ಯುಎಸ್ ಭೇಟಿಯ ಸಮಯದಲ್ಲಿ ಭಾರತೀಯ-ಅಮೆರಿಕನ್ನರನ್ನು ಉದ್ದೇಶಿಸಿ ಮತ್ತು ವಾಲ್ ಸ್ಟ್ರೀಟ್ ಕಾರ್ಯನಿರ್ವಾಹಕರು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ಅವರ ಭೇಟಿ ಜೂನ್ 4ರಂದು ನ್ಯೂಯಾರ್ಕ್‌ನಲ್ಲಿ ಸಾರ್ವಜನಿಕ ಸಭೆಯೊಂದಿಗೆ ಕೊನೆಗೊಳ್ಳಲಿದೆ. ಈ ಕಾರ್ಯಕ್ರಮವು ನ್ಯೂಯಾರ್ಕ್‌ನ ಜಾವಿಟ್ಸ್ ಸೆಂಟರ್‌ನಲ್ಲಿ ನಡೆಯಲಿದೆ.

ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ರಾಹುಲ್ ಮಾತನಾಡಿದರು. ಈ ವೇಳೆ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹೊಸ ಸಂಸತ್ ಭವನದ ಉದ್ಘಾಟನೆಯು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಎಂದು ನಾನು ಭಾವಿಸುತ್ತೇನೆ ಎಂದು ರಾಹುಲ್ ಹೇಳಿದರು. ನಿರುದ್ಯೋಗ, ಹಣದುಬ್ಬರ, ದ್ವೇಷ, ಶಿಕ್ಷಣ ಸಂಸ್ಥೆಗಳ ಕೊರತೆಯಂತಹ ವಿಷಯಗಳನ್ನು ಚರ್ಚಿಸಲು ಬಿಜೆಪಿ ಬಯಸುವುದಿಲ್ಲ. ಅದಕ್ಕಾಗಿಯೇ ಈ ಎಲ್ಲಾ ಸಮಸ್ಯೆಗಳನ್ನು ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ. ಬಿಜೆಪಿಗರು ನಮ್ಮ ಭಾರತ್ ಜೋಡೋ ಯಾತ್ರೆಯನ್ನು ತಡೆಯಲು ಪ್ರಯತ್ನಿಸಿದರು ಎಂದು ರಾಹುಲ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com