ಮಾಲ್ಡೀವ್ಸ್ 60ನೇ ಸ್ವಾತಂತ್ರ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಮೋದಿಗೆ ಆಹ್ವಾನ; ಚೀನಾ ಪರವಿದ್ದ ಮುಯಿಝು ದಿಢೀರ್ ಬದಲಾಗಿದ್ದೇಕೆ?

ಮೊಹಮ್ಮದ್ ಮುಯಿಝು ಅಧ್ಯಕ್ಷರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ.
Mohamed Muizzu-Narendra Modi
ಮೊಹಮ್ಮದ್ ಮುಯಿಝು-ನರೇಂದ್ರ ಮೋದಿ
Updated on

ನವದೆಹಲಿ: ಮೊಹಮ್ಮದ್ ಮುಯಿಝು ಅಧ್ಯಕ್ಷರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಮಾಲ್ಡೀವ್ಸ್‌ನ 60ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಧಾನಿ ಜುಲೈ 25 ಮತ್ತು 26 ರಂದು ಮಾಲ್ಡೀವ್ಸ್‌ನಲ್ಲಿರುತ್ತಾರೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯ ಅತಿಥಿಯನ್ನಾಗಿ ಮಾಡಿರುವುದು ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಸಂಬಂಧಗಳು ಮತ್ತೆ ಹಳಿಗೆ ಬಂದಿವೆ ಎಂಬುದನ್ನು ಸೂಚಿಸುತ್ತದೆ. ಅದೇ ಸಮಯದಲ್ಲಿ, ಮಾಲ್ಡೀವ್ಸ್ ಸಹ ತನ್ನ ಹಿಂದಿನ ತಪ್ಪುಗಳನ್ನು ಅರಿತುಕೊಂಡಿದೆ.

ಜುಲೈ 25 ರಿಂದ 26 ರವರೆಗೆ ಮಾಲ್ಡೀವ್ಸ್‌ಗೆ ಪ್ರಧಾನಿಯವರ ಭೇಟಿಯು ದ್ವಿಪಕ್ಷೀಯ ಸಂಬಂಧಗಳ ಪುನಃಸ್ಥಾಪನೆಯನ್ನು ಸಂಕೇತಿಸುವುದರಿಂದ ಮಹತ್ವದ್ದಾಗಿದೆ ಎಂದು ಪರಿಗಣಿಸಲಾಗಿದೆ. ಚೀನಾ ಪರ ಎಂದು ಪರಿಗಣಿಸಲಾದ ಮೊಹಮ್ಮದ್ ಮುಯಿಝು ನವೆಂಬರ್ 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಎರಡೂ ದೇಶಗಳ ನಡುವಿನ ಸಂಬಂಧಗಳು ಹಳಸಿತ್ತು.

ಜುಲೈ 23 ಮತ್ತು 24 ಇಂಗ್ಲೆಂಡ್ ಪ್ರವಾಸ ಬಳಿಕ ನರೇಂದ್ರ ಮೋದಿ ಅವರು, ಲಂಡನ್‌ನಿಂದ ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ. ಜುಲೈ 26 ರಂದು ಮಾಲ್ಡೀವ್ಸ್‌ನ ಸ್ವಾತಂತ್ರ್ಯದ 60 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯಲಿರುವ ಆಚರಣೆಗಳಲ್ಲಿ ಅವರು ಮುಖ್ಯವಾಗಿ ಭಾಗವಹಿಸಲಿದ್ದಾರೆ. ಇದು ಮಾಲ್ಡೀವ್ಸ್‌ಗೆ ಮೋದಿಯವರ ಮೂರನೇ ಭೇಟಿ ಮತ್ತು 2023 ರ ನವೆಂಬರ್‌ನಲ್ಲಿ ಅಧ್ಯಕ್ಷ ಮುಯಿಝು ಅಧಿಕಾರ ವಹಿಸಿಕೊಂಡ ನಂತರ ಭಾರತದ ಪ್ರಧಾನಿಯ ಮೊದಲ ಭೇಟಿಯಾಗಿದೆ. ಭೇಟಿ ವೇಳೆ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮುಯಿಝು ದ್ವಿಪಕ್ಷೀಯ ವಿಷಯಗಳನ್ನು ಚರ್ಚಿಸುತ್ತಾರೆ. 'ಸಮಗ್ರ ಆರ್ಥಿಕ ಮತ್ತು ಕಡಲ ಭದ್ರತಾ ಪಾಲುದಾರಿಕೆ'ಗಾಗಿ ಭಾರತ-ಮಾಲ್ಡೀವ್ಸ್ ಜಂಟಿ ದೃಷ್ಟಿಕೋನದ ಅನುಷ್ಠಾನದಲ್ಲಿನ ಪ್ರಗತಿಯನ್ನು ಪರಿಶೀಲಿಸುತ್ತಾರೆ.

Mohamed Muizzu-Narendra Modi
ನಿಮ್ಮ ಆರ್ಥಿಕತೆಯೇ ನಮ್ಮ "ಟಾರ್ಗೆಟ್" ಆಗಲಿದೆ: ರಷ್ಯಾ ವಿಚಾರವಾಗಿ ಭಾರತ, ಚೀನಾಗೆ ಅಮೆರಿಕ ಬೆದರಿಕೆ!

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮುಯಿಝು ಅವರ ಭಾರತ ಭೇಟಿಯ ಸಮಯದಲ್ಲಿ ಈ ಜಂಟಿ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಲಾಯಿತು. ಭಾರತದ 'ನೆರೆಹೊರೆ ಮೊದಲು' ನೀತಿ ಮತ್ತು 'ವಿಷನ್ ಓಷನ್' (ಪ್ರದೇಶದಲ್ಲಿ ಭದ್ರತೆ ಮತ್ತು ಅಭಿವೃದ್ಧಿಗಾಗಿ ಪರಸ್ಪರ ಮತ್ತು ಸಮಗ್ರ ಪ್ರಗತಿ) ಯಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಮಾಲ್ಡೀವ್ಸ್‌ಗೆ ಭಾರತ ನೀಡುವ ಪ್ರಾಮುಖ್ಯತೆಯನ್ನು ಈ ಭೇಟಿ ಪ್ರತಿಬಿಂಬಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಈ ಭೇಟಿಯು ಎರಡೂ ಕಡೆಯವರಿಗೆ ನಿಕಟ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಾಢವಾಗಿಸಲು ಮತ್ತು ಬಲಪಡಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com