ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!

ಮೃತರೆಲ್ಲರೂ ಕತಾರ್ ನಲ್ಲಿ ನೆಲೆಸಿದ್ದ ಭಾರತೀಯ ಮೂಲದವರು ಎಂದು ಗುರುತಿಸಲಾಗಿದ್ದು ಐವರು ಕೇರಳಿಗರು ಎಂದು ತಿಳಿದುಬಂದಿದೆ.
ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!
Updated on

ಕೀನ್ಯಾದಲ್ಲಿ ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಆರು ಭಾರತೀಯರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಕತಾರ್ ನಲ್ಲಿ ನೆಲೆಸಿದ್ದ ಭಾರತೀಯ ಮೂಲದವರು ಎಂದು ಗುರುತಿಸಲಾಗಿದ್ದು ಐವರು ಕೇರಳಿಗರು ಎಂದು ತಿಳಿದುಬಂದಿದೆ. ಮೃತರಾದ ಮಲಯಾಳಿಗಳಾದ ಮಾವೆಲಿಕ್ಕರ ಮೂಲದ ಗೀತಾ ಶೋಜಿ ಐಸಾಕ್ (58), ಜಸ್ನಾ ಕುಟ್ಟಿಕ್ಕಟ್ಟುಚಲಿಲ್ (29), ರುಹಿ ಮೆಹ್ರಿ ಮೊಹಮ್ಮದ್ (18 ತಿಂಗಳ), ಒಟ್ಟಪಾಲಂ ಮೂಲದ ರಿಯಾ ಎನ್ (41) ಮತ್ತು ಟೈರಾ ರೊಡ್ರಿಗಸ್ (8) ಎಂದು ಗುರುತಿಸಲಾಗಿದೆ. ಆದರೆ ಮತೋರ್ವನ ಗುರುತು ಪತ್ತೆಯಾಗಿಲ್ಲ.

ನ್ಯಾಂಡರುವಾ ಕೌಂಟಿಯ ಓಲ್ ಜೊರೊರೊಕ್-ನಕುರು ರಸ್ತೆಯಲ್ಲಿರುವ ಗಿಚಾಕಾದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಿಗರು ನ್ಯಾಹುರುರುವಿನ ಪನಾರಿ ರೆಸಾರ್ಟ್‌ಗೆ ತೆರಳುತ್ತಿದ್ದಾಗ ಅವರ ಬಸ್ ಕಂದಕಕ್ಕೆ ಬಿದ್ದಿತು. ಕಡಿದಾದ ಇಳಿಜಾರಿನ ಪ್ರದೇಶದಲ್ಲಿ ತಿರುವು ಪಡೆಯಲು ಯತ್ನಿಸಿದಾಗ ಚಾಲಕ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ 28 ಪ್ರವಾಸಿಗರು, ಮೂವರು ಸ್ಥಳೀಯ ಮಾರ್ಗದರ್ಶಕರು ಮತ್ತು ಚಾಲಕನನ್ನು ಹೊತ್ತೊಯ್ಯುತ್ತಿತ್ತು.

ನೈರೋಬಿಯಲ್ಲಿರುವ ಭಾರತೀಯ ಹೈಕಮಿಷನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು. ಮೃತರ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಹೈಕಮಿಷನ್‌ನ ಅಧಿಕಾರಿಗಳ ತಂಡವು ಸ್ಥಳದಲ್ಲಿದ್ದು, ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ. ನಮ್ಮನ್ನು +254 734916532 ನಲ್ಲಿ ಸಂಪರ್ಕಿಸಬಹುದು ಎಂದು ಹೈಕಮಿಷನ್ ಹೇಳಿದೆ.

ಕೀನ್ಯಾದಲ್ಲಿ ಘೋರ ಘಟನೆ: ಭೀಕರ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಕೇರಳ ಮೂಲದ ಐವರು ದುರ್ಮರಣ!
ಮಾಲ್ಡೀವ್ಸ್ ಬಹಿಷ್ಕಾರಕ್ಕೆ ಸೆಡ್ಡು: ಭಾರತೀಯರನ್ನು ಸೆಳೆಯಲು ನಟಿ ಕತ್ರಿನಾ ಕೈಫ್‍ನ ಪ್ರವಾಸೋದ್ಯಮದ ರಾಯಭಾರಿಯಾಗಿ ಮಾಡಿದ ಮುಯಿಜು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com