Indian Army ದಾಳಿ ಭೀತಿ: 450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ

450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್‌ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ.
Pakistan said it successfully test-fired the Abdali Weapon System, a surface-to-surface missile
ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್‌ ಕ್ಷಿಪಣಿ ಪರೀಕ್ಷೆ
Updated on

ಇಸ್ಲಾಮಾಬಾದ್: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದಿದ್ದು, ಇದರ ನಡುವೆಯೇ ಭಾರತೀಯ ಸೇನೆಯ ದಾಳಿ ಆತಂಕದಲ್ಲಿರುವ ಪಾಕಿಸ್ತಾನ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ.

ಈ ಬಗ್ಗೆ ಪಾಕಿಸ್ತಾನ ಸೇನಾ ಮೂಲಗಳು ಮಾಹಿತಿ ನೀಡಿದ್ದು, 450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್‌ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ.

"ಈ ಉಡಾವಣೆಯು ಸೈನಿಕರ ಕಾರ್ಯಾಚರಣೆಯ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳುವ ಮತ್ತು ಕ್ಷಿಪಣಿಯ ಸುಧಾರಿತ ಸಂಚರಣೆ ವ್ಯವಸ್ಥೆ ಮತ್ತು ವರ್ಧಿತ ಕುಶಲತೆಯ ವೈಶಿಷ್ಟ್ಯಗಳು ಸೇರಿದಂತೆ ಪ್ರಮುಖ ತಾಂತ್ರಿಕ ನಿಯತಾಂಕಗಳನ್ನು ಮೌಲ್ಯೀಕರಿಸುವ ಗುರಿಯನ್ನು ಹೊಂದಿತ್ತು" ಎಂದು ಪಾಕಿಸ್ತಾನ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

Pakistan said it successfully test-fired the Abdali Weapon System, a surface-to-surface missile
ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದು ನಿಷೇಧ: ಕೇಂದ್ರ ಸರ್ಕಾರ ಅಧಿಸೂಚನೆ

ತರಬೇತಿ ಉಡಾವಣೆಯನ್ನು ಸೇನಾ ಕಾರ್ಯತಂತ್ರದ ಪಡೆಗಳ ಕಮಾಂಡರ್, ಕಾರ್ಯತಂತ್ರದ ಯೋಜನೆಗಳ ವಿಭಾಗದ ಹಿರಿಯ ಅಧಿಕಾರಿಗಳು, ಸೇನಾ ಕಾರ್ಯತಂತ್ರದ ಪಡೆಗಳ ಕಮಾಂಡ್ ಹಾಗೂ ಪಾಕಿಸ್ತಾನದ ಕಾರ್ಯತಂತ್ರದ ಸಂಸ್ಥೆಗಳ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳು ವೀಕ್ಷಿಸಿದರು ಎಂದು ಹೇಳಲಾಗಿದೆ.

ಕ್ಷಿಪಣಿ ಉಡಾವಣೆಯು 'Excersize INDUS' ನ ಭಾಗವಾಗಿದೆ ಎಂದು ಸೇನೆಯು ಸೇನಾತರಬೇತಿ ಬಗ್ಗೆ ವಿವರಗಳನ್ನು ನೀಡದೆ ಹೇಳಿದೆ.

ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ, ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇವಾ ಮುಖ್ಯಸ್ಥರು ಭಾಗವಹಿಸುವ ಪಡೆಗಳು, ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ತಮ್ಮ ಅಭಿನಂದನೆಗಳನ್ನು ಸಲ್ಲಿಸಿದರು. ಯಾವುದೇ ಆಕ್ರಮಣದ ವಿರುದ್ಧ ವಿಶ್ವಾಸಾರ್ಹ ಕನಿಷ್ಠ ತಡೆಗಟ್ಟುವಿಕೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಕಾಪಾಡಲು ಪಾಕಿಸ್ತಾನದ ಕಾರ್ಯತಂತ್ರದ ಪಡೆಗಳ ಕಾರ್ಯಾಚರಣೆಯ ಸನ್ನದ್ಧತೆ ಮತ್ತು ತಾಂತ್ರಿಕ ಪ್ರಾವೀಣ್ಯತೆಯ ಬಗ್ಗೆ ಅವರು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು.

26 ಮಂದಿಯ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ್ದು ಯಾವುದೇ ಕ್ಷಣದಲ್ಲೂ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಬಹುದು. ಸೇನಾ ದಾಳಿ ಮೂಲಕ ಭಾರತ ಪ್ರತೀಕಾರ ತೀರಿಸಿಕತೊಳ್ಳಲಿದೆ ಎಂದು ಪಾಕಿಸ್ತಾನ ಸರ್ಕಾರ ಆತಂಕ ವ್ಯಕ್ತಪಡಿಸುತ್ತಲೇ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com