ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಭಾರತೀಯ ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಿದೆ: ಪಾಕ್ ಪ್ರಧಾನಿ Shehbaz Sharif ಹೇಳಿಕೆ ಅಪಹಾಸ್ಯಕ್ಕೆ ಗುರಿ

ಷರೀಫ್ ಹೇಳಿಕೆಗಳು ವಿವಿಧ ಕಡೆಯಿಂದ ಅಪಹಾಸ್ಯಕ್ಕೆ ಗುರಿಯಾಗಿವೆ. ಪುರಾವೆಗಳ ಕೊರತೆಯಿಂದಾಗಿ ಅವರ ಹೇಳಿಕೆಯನ್ನು ಅನೇಕರು ಪ್ರಶ್ನಿಸಿದ್ದಾರೆ.
Pakistan PM Shehbaz Sharif
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ online desk
Updated on

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಾಮಾಜಿಕ ಮಾಧ್ಯಮದಲ್ಲಿ ಪಾಕಿಸ್ತಾನಿ ಪಡೆಗಳು ಭಾರತೀಯ ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೆ ನೀಡಿರುವುದು ಅಪಹಾಸ್ಯಕ್ಕೆ ಗುರಿಯಾಗಿದೆ.

ಪಾಕಿಸ್ತಾನದಲ್ಲಿನ 9 ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರ ಈ ಹೇಳಿಕೆ ಬಂದಿದೆ. ಯಾವುದೇ ಪುರಾವೆಗಳಿಲ್ಲದೆ ಈ ಹೇಳಿಕೆಯನ್ನು ನೀಡಲಾಗಿದೆ.

ಷರೀಫ್ ಹೇಳಿಕೆಗಳು ವಿವಿಧ ಕಡೆಯಿಂದ ಅಪಹಾಸ್ಯಕ್ಕೆ ಗುರಿಯಾಗಿವೆ. ಪುರಾವೆಗಳ ಕೊರತೆಯಿಂದಾಗಿ ಅವರ ಹೇಳಿಕೆಯನ್ನು ಅನೇಕರು ಪ್ರಶ್ನಿಸಿದ್ದಾರೆ.

Pakistan PM Shehbaz Sharif
ಆಪರೇಷನ್ ಸಿಂಧೂರ್: ರಾತ್ರೋರಾತ್ರಿ ನಡೆದ ಕಾರ್ಯಾಚರಣೆಯ ಮೇಲೆ ಮೋದಿ ನಿಗಾ; ಇಂಚಿಂಚೂ ಮಾಹಿತಿ ಪಡೆದ ಪ್ರದಾನಿ; Video

ಭಾರತದ ಆಪರೇಷನ್ ಸಿಂಧೂರ್ ಪಾಕಿಸ್ತಾನದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡುವ ಗುರಿಯನ್ನು ಹೊಂದಿರುವ ನಿಖರವಾದ ದಾಳಿಯಾಗಿದೆ. ಇದು ಪಹಲ್ಗಾಮ್‌ನಲ್ಲಿ ನಡೆದ ದಾಳಿಗೆ ನೇರ ಪ್ರತಿಕ್ರಿಯೆಯಾಗಿದ್ದು ಎರಡೂ ದೇಶಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಭಯೋತ್ಪಾದಕರು ಬಳಸುತ್ತಾರೆಂದು ನಂಬಲಾದ ನಿರ್ದಿಷ್ಟ ಸ್ಥಳಗಳನ್ನು ಗುರಿಯಾಗಿಸಿಕೊಂಡು ಭಾರತ ಕಾರ್ಯಾಚರಣೆ ನಡೆಸಿದೆ. ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮುಂದಿನ ದಾಳಿಗಳನ್ನು ತಡೆಯಲು ಈ ದಾಳಿಗಳು ಅಗತ್ಯವೆಂದು ಭಾರತ ಸರ್ಕಾರ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಿದ ಬಗ್ಗೆ ಷರೀಫ್ ಹೇಳಿಕೆ ನೀಡಿದ್ದು, ಇದರಲ್ಲಿ ವಿಶ್ವಾಸಾರ್ಹತೆಯ ಕೊರತೆ ಕಾಣುತ್ತಿತ್ತು. ಯಾವುದೇ ಪುರಾವೆಗಳು ಅಥವಾ ಅಧಿಕೃತ ದೃಢೀಕರಣ ಅವರ ಹೇಳಿಕೆಗಳನ್ನು ಬೆಂಬಲಿಸಲಿಲ್ಲ, ಇದರಿಂದಾಗಿ ಅನೇಕರು ಅವುಗಳನ್ನು ಕೇವಲ ಪ್ರಚಾರವಷ್ಟೇ ಎಂದು ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com