

ಇಸ್ರೇಲ್ ನ IDF ಪಡೆ ನಿನ್ನೆ ರಾತ್ರಿ ಬೈರುತ್ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ನಿನ್ನೆ ರಾತ್ರಿ ಬೈರುತ್ನಲ್ಲಿ ನಡೆದ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಇಸ್ರೇಲಿ ಸೇನೆಯ ವಕ್ತಾರ ಅವಿಚೇ ಅಡ್ರೇ ಟ್ವೀಟ್ ಮಾಡಿದ್ದಾರೆ.
ಇಸ್ರೇಲ್ ರಕ್ಷಣಾ ಪಡೆಗಳು ಬೈರುತ್ನಲ್ಲಿ ಹಿಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ಅವರನ್ನು ನಿರ್ಮೂಲನೆ ಮಾಡಿದೆ. ಅದೇ ಸಮಯದಲ್ಲಿ ದಕ್ಷಿಣ ಲೆಬನಾನ್ನಲ್ಲಿನ ಹಲವಾರು ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡಿತ್ತು. ದಾಳಿಯ ಸಮಯದಲ್ಲಿ, ಹೆಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿಯ ವೈಯಕ್ತಿಕ ಕಾರ್ಯದರ್ಶಿ ಮತ್ತು ಸೋದರಳಿಯ ಅಲಿ ಯೂಸೆಫ್ ಹರ್ಷಿ ಕೂಡ ಹತ್ಯೆಯಾಗಿದ್ದಾರೆ ಎಂದು ಅವರು ಹೇಳಿದರು. ನಯೀಮ್ ಖಾಸಿಮ್ಗೆ ಕಚೇರಿ ನಿರ್ವಹಣೆ ಮತ್ತು ಭದ್ರತೆಯನ್ನು ಒದಗಿಸುವಲ್ಲಿ ಹರ್ಷಿ ಪ್ರಮುಖ ಪಾತ್ರವಹಿಸುತ್ತಿದ್ದರು.
ಹೆಜ್ಬೊಲ್ಲಾ ವಿರುದ್ಧ ಇಸ್ರೇಲಿ ವಾಯುದಾಳಿ ನಡೆಸಿದ ನಂತರ ಇರಾನ್ ಬುಧವಾರ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಏತನ್ಮಧ್ಯೆ, ಜಾಗತಿಕ ತೈಲ ಸಾಗಣೆಗೆ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ತಕ್ಷಣ ಮತ್ತೆ ತೆರೆಯಬೇಕೆಂದು ಅಮೆರಿಕ ಒತ್ತಾಯಿಸಿದೆ. ಲೆಬನಾನ್ ಮೇಲಿನ ಇಸ್ರೇಲಿ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ತೆಗೆದುಕೊಂಡ ಕ್ರಮಗಳು ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮ ಒಪ್ಪಂದವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
Advertisement