ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಿಲ್ಲದ ದೌರ್ಜನ್ಯ: ಆಟೋ ಚಾಲಕನ ಬರ್ಬರ ಹತ್ಯೆ

ಚಿತ್ತಗಾಂಗ್‌ನ ದಗನ್‌ಭೂಯಾನ್ ಎಂಬಲ್ಲಿ ಭಾನುವಾರ ರಾತ್ರಿ ದುಷ್ಕರ್ಮಿಗಳು ಸಮೀರ್ ದಾಸ್ ಅವರನ್ನು ಸುತ್ತುವರಿದು, ನಾಡಬಂದೂಕು ಹಾಗೂ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ, ಬರ್ಬರವಾಗಿ ಕೊಂದಿದ್ದಾರೆ
ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಿಲ್ಲದ ದೌರ್ಜನ್ಯ: ಆಟೋ ಚಾಲಕನ ಬರ್ಬರ ಹತ್ಯೆ
Updated on

ಢಾಕಾ: ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದಾಳಿ ಮುಂದುವರೆಯುತ್ತಿದೆ. ಸಮೀರ್ ದಾಸ್ ಎಂಬ 28 ವರ್ಷದ ಹಿಂದೂ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜ.12ರಂದು ಬೆಳಕಿಗೆ ಬಂದಿದೆ.

ಸಮೀರ್ ಕುಮಾರ್ ದಾಸ್ ಫೆನಿ ಜಿಲ್ಲೆಯ ನಿವಾಸಿ. ಆಟೋ ಓಡಿಸಿ ಜೀವನ ನಡೆಸುತ್ತಿದ್ದರು. ಜ.11ರಾತ್ರಿ ಭಾನುವಾರ ಎಂದಿನಂತೆ ಅವರು ಕೆಲಸಕ್ಕೆ ತೆರಳಿದ್ದರು. ಆದರೆ, ಅಂದು ಅವರು ಮನೆಗೆ ವಾಪಸ್‌ ಆಗಲೇ ಇಲ್ಲ. ಗೊಂದಲ, ಆತಂಕಕ್ಕೆ ಒಳಗಾದ ಕುಟುಂಬಸ್ಥರು, ಪೊಲೀಸರಿಗೆ ದೂರು ಕೊಟ್ಟರು. ಸೋಮವಾರ ಮುಂಜಾನೆ ದಕ್ಷಿಣ ಕರಿಂಪುರದ ಮುಹುರಿ ಬಾರಿ ಬಳಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಮೀರ್‌ ಕುಮಾರ್‌ದಾಸ್‌ಅವರ ದೇಹ ಸಿಕ್ಕಿದೆ.

ಚಿತ್ತಗಾಂಗ್‌ನ ದಗನ್‌ಭೂಯಾನ್ ಎಂಬಲ್ಲಿ ಭಾನುವಾರ ರಾತ್ರಿ ದುಷ್ಕರ್ಮಿಗಳು ಸಮೀರ್ ದಾಸ್ ಅವರನ್ನು ಸುತ್ತುವರಿದು, ನಾಡಬಂದೂಕು ಹಾಗೂ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ, ಬರ್ಬರವಾಗಿ ಕೊಂದಿದ್ದಾರೆ. ಹತ್ಯೆಯ ನಂತರ, ಆರೋಪಿಗಳು ಅವರ ಬ್ಯಾಟರಿ ಚಾಲಿತ ಆಟೋ ರಿಕ್ಷಾವನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದು ಪೂರ್ವನಿಯೋಜಿತ ಕೊಲೆಯಂತೆ ಭಾಸವಾಗುತ್ತಿದೆ. ಕೊಲೆಗಾರರು ಆಟೋವನ್ನು ಲೂಟಿ ಮಾಡಿದ್ದಾರೆ. ಸಂತ್ರಸ್ತನ ಕುಟುಂಬವು ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳ ಬಂಧನಕ್ಕಾಗಿ ತನಿಖೆ ಆರಂಭಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲೆ ನಿಲ್ಲದ ದೌರ್ಜನ್ಯ: ಆಟೋ ಚಾಲಕನ ಬರ್ಬರ ಹತ್ಯೆ
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ಥಳಿಸಿ, ವಿಷಪ್ರಾಶನ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com