ಅಚ್ಚರಿ ಮತ್ತು ಆಘಾತ ತಂದಿದೆ: ಭಾರತದಲ್ಲಿ ಶೇಖ್ ಹಸೀನಾ ಭಾಷಣಕ್ಕೆ ಬಾಂಗ್ಲಾದೇಶ ಕಳವಳ

ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಶೇಖ್ ಹಸೀನಾ ಅವರ ಹಸ್ತಾಂತರಕ್ಕಾಗಿ ಬಾಕಿ ಇರುವ ವಿನಂತಿಗಳನ್ನು ಸಹ ಸಚಿವಾಲಯ ಉಲ್ಲೇಖಿಸಿದೆ.
Sheikh Hasina
ಶೇಖ್ ಹಸೀನಾ
Updated on

ಭಾರತದಲ್ಲಿ ಬಾಂಗ್ಲಾದೇಶ ಬಗ್ಗೆ ಮಾತನಾಡಲು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅವಕಾಶ ನೀಡಿರುವ ಬಗ್ಗೆ ಅಲ್ಲಿನ ಕಳವಳ ವ್ಯಕ್ತಪಡಿಸಿದೆ. ಫೆಬ್ರವರಿ 12 ರಂದು ಬಾಂಗ್ಲಾದೇಶದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ಶೇಖ್ ಹಸೀನಾ ಅವರ ಮಾತುಗಳು ದೇಶದ ರಾಜಕೀಯ ಸ್ಥಿರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ಢಾಕಾದಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ದೆಹಲಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲು ಮತ್ತು ಮಧ್ಯಂತರ ಸರ್ಕಾರದ ವಿರುದ್ಧ ರಾಜಕೀಯ ಹೇಳಿಕೆಗಳನ್ನು ನೀಡಲು ಹಸೀನಾ ಅವರಿಗೆ ಅವಕಾಶ ನೀಡಿರುವುದು ಆಶ್ಚರ್ಯ ಮತ್ತು ಆಘಾತ ತಂದಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಎಸ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದು ಬಾಂಗ್ಲಾದೇಶದ ಪ್ರಜಾಸತ್ತಾತ್ಮಕ ಪರಿವರ್ತನೆ ಮತ್ತು ಶಾಂತಿ ಮತ್ತು ಭದ್ರತೆಗೆ ಸ್ಪಷ್ಟವಾಗಿ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿಕೆ ತಿಳಿಸಿದೆ.

ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಶೇಖ್ ಹಸೀನಾ ಅವರ ಹಸ್ತಾಂತರಕ್ಕಾಗಿ ಬಾಕಿ ಇರುವ ವಿನಂತಿಗಳನ್ನು ಸಹ ಸಚಿವಾಲಯ ಉಲ್ಲೇಖಿಸಿದೆ.

Sheikh Hasina
ಬಾಂಗ್ಲಾದೇಶವೇಕೆ ಅಲ್ಪಸಂಖ್ಯಾತರಿಗೆ ಅಸುರಕ್ಷಿತ?: ಶೇಖ್ ಹಸೀನಾ ಹೇಳಿದ್ದಿಷ್ಟು...

ಪದೇ ಪದೇ ವಿನಂತಿಸಿದರೂ, ಹಸೀನಾ ಅವರನ್ನು ಹಸ್ತಾಂತರಿಸುವ ವಿಷಯವು ಪ್ರಗತಿ ಸಾಧಿಸದಿರುವುದು ಬಾಂಗ್ಲಾದೇಶಕ್ಕೆ ದುಃಖ ತಂದಿದೆ. ಆದರೆ ಅವರಿಗೆ ಭಾರತದಿಂದ ರಾಜಕೀಯ ಹೇಳಿಕೆಗಳನ್ನು ನೀಡಲು ಅನುಮತಿ ನೀಡಿರುವುದು ಕಳವಳಕಾರಿ ವಿಷಯ. ಅಂತಹ ಕ್ರಮಗಳು ಎರಡೂ ದೇಶಗಳ ನಡುವಿನ ಹಸ್ತಕ್ಷೇಪ ಮಾಡದಿರುವುದು ಮತ್ತು ಉತ್ತಮ ನೆರೆಹೊರೆಯ ಸಂಬಂಧಗಳ ಮಾನದಂಡಗಳಿಗೆ ವಿರುದ್ಧವಾಗಿವೆ ಎಂದು ಬಾಂಗ್ಲಾ ಸರ್ಕಾರ ಹೇಳಿದೆ.

ಢಾಕಾದಿಂದ ಪಲಾಯನ ಮಾಡಿದ ನಂತರ ಭಾರತದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾಡಿದ ಮೊದಲ ಸಾರ್ವಜನಿಕ ಭಾಷಣದಲ್ಲಿ, ಶೇಖ್ ಹಸೀನಾ ಅವರು ಬಾಂಗ್ಲಾದೇಶದಲ್ಲಿ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಆಡಳಿತವನ್ನು ಉರುಳಿಸುವಂತೆ ಬಾಂಗ್ಲಾದೇಶದ ಜನರಿಗೆ ಕರೆ ನೀಡಿದ್ದಾರೆ. ಅದು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನೀಡಲು ಅಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಮುಹಮ್ಮದ್ ಯೂನಸ್ ಅವರನ್ನು ಕೊಲೆಗಾರ ಫ್ಯಾಸಿಸ್ಟ್ ಮತ್ತು ಅಧಿಕಾರದ ಹಸಿದ ದೇಶದ್ರೋಹಿ ಎಂದು ಕರೆದಿದ್ದಾರೆ. ಸರ್ಕಾರವು ಹಿಂಸೆ, ಚಿತ್ರಹಿಂಸೆ, ಅಲ್ಪಸಂಖ್ಯಾತರ ಮೇಲಿನ ದಾಳಿ ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಅವಕಾಶ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

Sheikh Hasina
'ಬಾಂಗ್ಲಾದೇಶ ಜೊತೆ ಭಾರತ ನಿಕಟ-ಸ್ನೇಹಪರ ಸಂಬಂಧ ಬಯಸುತ್ತದೆ, ಶೇಖ್ ಹಸೀನಾ ಹಸ್ತಾಂತರ ವಿಷಯ ಪರಿಶೀಲನೆಯಲ್ಲಿದೆ': ವಿದೇಶಾಂಗ ಸಚಿವಾಲಯ

ಪ್ರಜಾಪ್ರಭುತ್ವವು ಈಗ ದೇಶಭ್ರಷ್ಟವಾಗಿದೆ. ಮಾನವ ಹಕ್ಕುಗಳನ್ನು ತುಳಿಯಲಾಗುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಅಳಿಸಿಹಾಕಲಾಗಿದೆ ಎಂದು ಅವರು ಭಾಷಣದಲ್ಲಿ ಹೇಳಿದ್ದಾರೆ.

78 ವರ್ಷದ ಶೇಖ್ ಹಸೀನಾ, ಆಗಸ್ಟ್ 2024 ರಲ್ಲಿ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ನೇತೃತ್ವದ ಬೃಹತ್ ಆಂದೋಲನದ ನಂತರ ಢಾಕಾದಿಂದ ಪಲಾಯನ ಮಾಡಿದ ನಂತರ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಕಳೆದ ವರ್ಷದ ಘಟನೆಗಳ ಬಗ್ಗೆ ನಿಜವಾದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಬಾಂಗ್ಲಾದೇಶವು ವಿಶ್ವಸಂಸ್ಥೆಯನ್ನು ಒತ್ತಾಯಿಸಬೇಕು ಮತ್ತು ಸಂವಿಧಾನವನ್ನು ಮರುಸ್ಥಾಪಿಸಲು, ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸಲು ಜನರು ಒಗ್ಗಟ್ಟಿನಿಂದ ಎದ್ದೇಳಬೇಕೆಂದು ಒತ್ತಾಯಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಸಂಸತ್ತಿನ ಚುನಾವಣೆಯ ಪ್ರಚಾರ ಆರಂಭವಾದ ಒಂದು ದಿನದ ನಂತರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶೇಖ್ ಹಸೀನಾ ಅವರ ಸಂದೇಶವನ್ನು ಮೊದಲೇ ರೆಕಾರ್ಡ್ ಮಾಡಲಾದ ಆಡಿಯೊ ಕ್ಲಿಪ್‌ನಲ್ಲಿ ಪ್ರಸಾರ ಮಾಡಲಾಯಿತು. ಅವರ ಅವಾಮಿ ಲೀಗ್ ಪಕ್ಷವನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಲಾಗಿದೆ.

ಆಗಸ್ಟ್ 2024 ರಲ್ಲಿ ಹಸೀನಾ ಸರ್ಕಾರ ಪತನಗೊಂಡ ನಂತರ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳು ಬಿಗಡಾಯಿಸಿದವು.

ಆ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com