ಭಾರತದ ಮೋಸ್ಟ್ ವಾಂಟೆಂಡ್ ಉಗ್ರ: ಪಾಕಿಸ್ತಾನದಲ್ಲಿ JeM ಭಯೋತ್ಪಾದಕ ಮಸೂದ್ ಅಜರ್‌ನ ಸಹೋದರ ನಿಗೂಢ ಸಾವು!

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ್ ಅಜರ್‌ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ. ಅವನ ಸಾವು ಇನ್ನೂ ನಿಗೂಢವಾಗಿಯೇ ಉಳಿದಿದೆ.
Tahir Anwar-Masood Azhar
ಮೊಹಮ್ಮದ್ ತಾಹಿರ್ ಅನ್ವರ್-ಮಸೂದ್ ಅಜರ್‌
Updated on

ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ್ ಅಜರ್‌ನ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ. ಅವನ ಸಾವು ಇನ್ನೂ ನಿಗೂಢವಾಗಿಯೇ ಉಳಿದಿದೆ. ತಾಹಿರ್ ಅನ್ವರ್ ನ ಸಾವನ್ನು ಜೈಶ್‌ನ ಅಧಿಕೃತ ಚಾನೆಲ್ ಮೂಲಕ ಬಹಿರಂಗಪಡಿಸಲಾಗಿದೆ.

ವರದಿಗಳ ಪ್ರಕಾರ, ತಾಹಿರ್ ಅನ್ವರ್ ಜೈಶ್-ಎ-ಮೊಹಮ್ಮದ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ದೀರ್ಘಕಾಲದಿಂದ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದು ಅದರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದನು. ಸಂಘಟನೆಯಲ್ಲಿ ಆತನ ಪಾತ್ರವನ್ನು ಮಹತ್ವದ್ದಾಗಿ ಪರಿಗಣಿಸಲಾಗಿದೆ ಎಂದು ಮೂಲಗಳು ಹೇಳುತ್ತವೆ.

ಜೈಶ್-ಎ-ಮೊಹಮ್ಮದ್ ಮತ್ತು ಮಸೂದ್ ಅಜರ್ ಭಾರತದಲ್ಲಿ ನಡೆದ ಹಲವಾರು ಪ್ರಮುಖ ಭಯೋತ್ಪಾದಕ ದಾಳಿಗಳಿಗೆ ಸಂಬಂಧ ಹೊಂದಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಈ ದಾಳಿಗಳು ಭದ್ರತೆ, ರಾಜಕೀಯ ಮತ್ತು ಭಾರತ-ಪಾಕಿಸ್ತಾನ ಸಂಬಂಧಗಳ ಮೇಲೆ ಆಳವಾದ ಪರಿಣಾಮ ಬೀರಿವೆ.

Tahir Anwar-Masood Azhar
ಲಷ್ಕರೆ ಬಾಂಗ್ಲಾದೇಶಿ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸರು: ಮಾಸ್ಟರ್ ಮೈಂಡ್ ಶಬೀರ್ ಲೋನ್ ಬಂಧನ!

ಪ್ರಮುಖ ಭಯೋತ್ಪಾದಕ ಘಟನೆಗಳು ಈ ಕೆಳಗಿನಂತಿವೆ...

* ದೆಹಲಿಯ ಸಂಸತ್ತಿನ ಮೇಲಿನ ದಾಳಿ: 2001ರ ಡಿಸೆಂಬರ್ 13ರಂದು ದೆಹಲಿ ಸಂಸತ್ ಭವನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು.

* ಪಠಾಣ್‌ಕೋಟ್ ವಾಯುನೆಲೆಯ ದಾಳಿ: 2016ರ ಜನವರಿಯಲ್ಲಿ ಆರು ಭಯೋತ್ಪಾದಕರು ಪಂಜಾಬ್ ನ ಭಾರತೀಯ ವಾಯುಪಡೆಯ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ದಾಳಿ ಮಾಡಿದರು.

* ಉರಿ ದಾಳಿ: 2016ರ ಸೆಪ್ಟೆಂಬರ್ ನಲ್ಲಿ ಜಮ್ಮು ಮತ್ತು ಕಾಶ್ಮೀರದ ಸೇನಾ ಶಿಬಿರದ ಮೇಲೆ ದಾಳಿ ಮಾಡಲಾಯಿತು. ಈ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾದರು.

* ಪುಲ್ವಾಮಾ ದಾಳಿ: 2019ರ ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲೆ ಆತ್ಮಾಹುತಿ ದಾಳಿ ನಡೆಯಿತು. 40 ಸೈನಿಕರು ಹುತಾತ್ಮರಾದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com