Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

ಪಾಕಿಸ್ತಾನಕ್ಕೆ ರಕ್ತಸಿಕ್ತ ಭಾನುವಾರವಾಗಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್‌ಪಾಯಿಂಟ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ.
IMP Attack
ಐಎಂಪಿ ಉಗ್ರ ದಾಳಿ
Updated on

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ರಕ್ತಸಿಕ್ತ ಭಾನುವಾರವಾಗಿದೆ. ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಚೆಕ್‌ಪಾಯಿಂಟ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 21 ಸೈನಿಕರು ಸಾವನ್ನಪ್ಪಿದ್ದು ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ. ದಾಳಿಕೋರರು ಮೊದಲು ಪೊಲೀಸ್ ಚೆಕ್‌ಪಾಯಿಂಟ್‌ನಲ್ಲಿ ಕಾರ್ ಬಾಂಬ್ ಸ್ಫೋಟಿಸಿದ್ದು ನಂತರ ಭಾರೀ ಗುಂಡು ಹಾರಿಸಿದರು. ಇದರಿಂದಾಗಿ ಪೊಲೀಸರಿಗೆ ಚೇತರಿಸಿಕೊಳ್ಳಲು ಅಥವಾ ಪ್ರತೀಕಾರ ತೀರಿಸಿಕೊಳ್ಳಲು ಸಮಯವಿರಲಿಲ್ಲ. ದಾಳಿಯ ನಂತರ, ದಾಳಿಕೋರರು ಪೊಲೀಸರ ಶಸ್ತ್ರಾಸ್ತ್ರಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದರು.

ಸಶಸ್ತ್ರ ಗುಂಪು ಇತ್ತೇಹಾದ್-ಉಲ್-ಮುಜಾಹಿದ್ದೀನ್ ಪಾಕಿಸ್ತಾನ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಖೈಬರ್ ಪಖ್ತುಂಖ್ವಾದ ಜಿಲ್ಲೆಯ ಬನ್ನು ಎಂಬಲ್ಲಿ ಶನಿವಾರ ತಡರಾತ್ರಿ ಈ ದಾಳಿ ನಡೆದಿದೆ. ಬನ್ನು ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನಿ ಜಿಲ್ಲೆಯಾಗಿದೆ. ದಾಳಿಕೋರರು ತಮ್ಮ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ ನಂತರ ಗಡಿಯನ್ನು ದಾಟಿ ಅಫ್ಘಾನಿಸ್ತಾನಕ್ಕೆ ಪಲಾಯನ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಪ್ರದೇಶವನ್ನು ಈಗಾಗಲೇ ದಾಳಿಕೋರರು ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, ಪೊಲೀಸ್, ಮಿಲಿಟರಿ ಮತ್ತು ಅರೆಸೈನಿಕ ಪಡೆಗಳ ಮೇಲೆ ಆಗಾಗ್ಗೆ ದಾಳಿ ನಡೆಸುತ್ತಾರೆ.

ಬನ್ನು ಪೊಲೀಸ್ ಅಧಿಕಾರಿ ಜಾಹಿದ್ ಖಾನ್ ಮಾತನಾಡಿ, ಭದ್ರತಾ ತಪಾಸಣಾ ಕೇಂದ್ರದ ಬಳಿ ಆತ್ಮಾಹುತಿ ಬಾಂಬರ್ ಮತ್ತು ಹಲವಾರು ದಾಳಿಕೋರರು ಸ್ಫೋಟಕಗಳಿಂದ ತುಂಬಿದ ವಾಹನವನ್ನು ಸ್ಫೋಟಿಸಿದ್ದಾರೆ ಎಂದು ಹೇಳಿದರು. ನಂತರ ತಕ್ಷಣವೇ ಹಲವಾರು ಸ್ಫೋಟಗಳು ಕೇಳಿಬಂದವು. ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ ಅದು ಚೆಕ್‌ಪಾಯಿಂಟ್ ಕುಸಿದು ಬಿದ್ದಿದೆ ಎಂದು ಅವರು ಹೇಳಿದರು.

IMP Attack
ಅದು 'ಎರಡು ಸಿದ್ಧಾಂತಗಳ ಕದನ'; ಪಾಕಿಸ್ತಾನದ ತಂತ್ರವು ಭಾರತಕ್ಕಿಂತ 'ಶ್ರೇಷ್ಠ'ವಾಗಿತ್ತು: ಸೇನಾ ಮುಖ್ಯಸ್ಥ ಆಸಿಮ್ ಮುನೀರ್

ಸ್ಫೋಟಕಗಳಿಂದ ತುಂಬಿದ ವಾಹನವು ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ದಾಳಿ ಮಾಡಿದೆ. ಕಟ್ಟಡದ ಬಹುಭಾಗವನ್ನು ನಾಶಪಡಿಸಿದ ಪ್ರಬಲ ಸ್ಫೋಟದ ನಂತರ, ಪೊಲೀಸ್ ತಪಾಸಣಾ ಕೇಂದ್ರದ ಮೇಲೆ ದಾಳಿ ನಡೆಸಲಾಯಿತು. ದಾಳಿಯಲ್ಲಿ ಕನಿಷ್ಠ 21 ಸೈನಿಕರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರು ಆಸ್ಪತ್ರೆಯಲ್ಲಿದ್ದಾರೆ.

ದಾಳಿ ವೇಳೆ ದಾಳಿಕೋರರು ಡ್ರೋನ್‌ಗಳನ್ನು ಸಹ ಬಳಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಫೋಟವು ಹತ್ತಿರದ ವಸತಿ ಪ್ರದೇಶಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿದ್ದು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಂದ ರಕ್ಷಣಾ ಸಂಸ್ಥೆಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬನ್ನುವಿನ ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಗಳು ಅಫ್ಘಾನ್ ಗಡಿಯಲ್ಲಿ ಮತ್ತೆ ಹೋರಾಟಕ್ಕೆ ಕಾರಣವಾಗಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com