ಶೀಘ್ರ ಭಾರತಕ್ಕೆ ಜಾಕಿರ್ ನಾಯಕ್ ಹಸ್ತಾಂತರ? ಪ್ರಧಾನಿ ಮೋದಿ ಜತೆಗಿನ ರಹಸ್ಯ ಚರ್ಚೆ ಬಗ್ಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದೇನು?

ವಿವಾದಿತ ಇಸ್ಲಾಮಿಕ್ ಧರ್ಮಪ್ರಚಾರಕ ಝಾಕಿರ್ ನಾಯ್ಕ್ ಭಾರತಕ್ಕೆ ಹಸ್ತಾಂತರ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯಲ್ಲಿ ಗಂಭೀರ ಚರ್ಚೆ ನಡೆಸಿರುವುದನ್ನು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಖಚಿತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Malaysian PM confirms discussion held with India about extradition of fugitive Islamic preacher Zakir Naik
ತಲೆಮರೆಸಿಕೊಂಡಿರುವ ಇಸ್ಲಾಮಿಕ್ ಧರ್ಮಗುರು ಝಾಕಿರ್ ನಾಯ್ಕ್ ಹಸ್ತಾಂತರದ ಕುರಿತು ಭಾರತದೊಂದಿಗೆ ಮಲೇಷ್ಯಾದ ಪ್ರಧಾನಿ ಚರ್ಚೆ ನಡೆಸಿದ್ದಾರೆ.Online Desk
Updated on

ನವದೆಹಲಿ: ಭಾರತದಲ್ಲಿ ಹಣ ಅಕ್ರಮ ವರ್ಗಾವಣೆ ಹಾಗೂ ದ್ವೇಷ ಭಾಷಣದ ಆರೋಪ ಹೊತ್ತು ಪರಾರಿಯಾಗಿರುವ ವಿವಾದಾತ್ಮಕ ಇಸ್ಲಾಮಿಕ್ ಪ್ರಚಾರಕ ಜಾಕಿರ್ ನಾಯಕ್ ಕುರಿತು ಇದೀಗ ಮಹತ್ವದ ಬೆಳವಣಿಗೆ ನಡೆದಿದೆ. ಹಲವು ವರ್ಷಗಳಿಂದ ಮಲೇಷ್ಯಾದಲ್ಲಿ ಆಶ್ರಯ ಪಡೆದಿರುವ ಈತನನ್ನು ಭಾರತಕ್ಕೆ ಮರಳಿ ಕರೆತರಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಫಲವಾಗಿ ಆತ ಭಾರತಕ್ಕೆ ಶೀಘ್ರದಲ್ಲೇ ಹಸ್ತಾಂತರಿಸುವ ಸಾಧ್ಯತೆ ದಟ್ಟವಾಗುತ್ತಿದೆ. ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಜಾಕಿರ್ ನಾಯಕ್ ವಿಚಾರವನ್ನು ಎರಡು ದೇಶಗಳ ನಡುವಿನ ನಂಬಿಕೆ ಮತ್ತು ಬಾಂಧವ್ಯವನ್ನು ವೃದ್ಧಿಸಲು ಈ ವಿಷಯಕ್ಕೆ ಆದ್ಯತೆಯ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ನಂತರ ಮಾತನಾಡಿದ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ಉಭಯ ದೇಶಗಳ ಹಿತಾಸಕ್ತಿಯನ್ನು ರಕ್ಷಿಸುವ ದೃಷ್ಟಿಯಿಂದ ಝಾಕಿರ್ ನಾಯ್ಕ್ ಹಸ್ತಾಂತರದ ವಿಷಯವನ್ನು ಖಾಸಗಿಯಾಗಿ ಚರ್ಚಿಸಲಾಗಿದ್ದು, ಭಾರತದ ಹಸ್ತಾಂತರದ ಬೇಡಿಕೆಯ ಬಗ್ಗೆ ನಮಗೆ ಸ್ಪಷ್ಟ ಗ್ರಹಿಕೆಯಿದೆ. ಆದರೆ ಮಲೇಷ್ಯಾ ತನ್ನ ದೇಶದ ಕಾನೂನಿನ ಚೌಕಟ್ಟು ಮತ್ತು ನಿಯಮಗಳನ್ನು ಗೌರವಿಸಬೇಕಾಗುತ್ತದೆ. ಹೀಗಾಗಿ ಈ ಪ್ರಕ್ರಿಯೆಯನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Malaysian PM confirms discussion held with India about extradition of fugitive Islamic preacher Zakir Naik
ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಮುಂದುವರೆದು, ಭಾರತೀಯ ತನಿಖಾ ಸಂಸ್ಥೆಗಳು ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಹಾಗೂ ಪೀಸ್ ಟಿವಿ ನೆಟ್‌ವರ್ಕ್ ವಿರುದ್ಧ ತನಿಖೆ ಆರಂಭಿಸಿದ ಬೆನ್ನಲ್ಲೇ ಜಾಕಿರ್ ನಾಯಕ್ 2016 ರಲ್ಲಿ ಮಲೇಷ್ಯಾಕ್ಕೆ ತೆರಳಿದ. ನಂತರ ಅಲ್ಲಿ ಶಾಶ್ವತ ನಿವಾಸಿ ಸ್ಥಾನಮಾನ ಪಡೆದು ವಾಸಿಸುತ್ತಿದ್ದಾನೆ. ಭಾರತ ಸರ್ಕಾರವು ಆತನ ಪಾಸ್‌ಪೋರ್ಟ್ ರದ್ದುಗೊಳಿಸಿ, 'ಘೋಷಿತ ಅಪರಾಧಿ' ಎಂದು ಘೋಷಿಸಿದ್ದು, ಆತನನ್ನು ಹಸ್ತಾಂತರಿಸುವಂತೆ ಮಲೇಷ್ಯಾಕ್ಕೆ ನಿರಂತರವಾಗಿ ಹಸ್ತಾಂತರಕ್ಕೆ ಔಪಚಾರಿಕ ವಿನಂತಿಗಳನ್ನು ಸಲ್ಲಿಸಿದೆ. ಆದರೆ, ಬಲವಾದ ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ಮಾತ್ರ ಸಹಕರಿಸುವುದಾಗಿ ಮಲೇಷ್ಯಾ ಈ ಹಿಂದೆ ತಿಳಿಸಿತ್ತು. ಜೊತೆಗೆ, 2019 ರಲ್ಲಿ ಜನಾಂಗೀಯ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ನಾಯಕ್ ಅವರ ಸಾರ್ವಜನಿಕ ಭಾಷಣಕ್ಕೆ ಮಲೇಷ್ಯಾದಲ್ಲೂ ನಿರ್ಬಂಧ ವಿಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com